ಮುಡಾ ಅಕ್ರಮ | ನನ್ನ ಪತ್ನಿ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಿಎಂ ಸಿದ್ದರಾಮಯ್ಯ

Date:

Advertisements

ಬಿಜೆಪಿಯವರು ನನ್ನ ಪತ್ನಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಡಾ ಅಕ್ರಮ ಬಗ್ಗೆ ಪ್ರಸ್ತಾಪವಾದರೆ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ” ಎಂದರು.

“ಮುಡಾದಿಂದ ಶೇ.50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

Advertisements

ರಾಜಕಾರಣಕ್ಕಾಗಿ ಬಿಜೆಪಿ ಪ್ರತಿಭಟನೆ

“ಭೂಮಿ ಕಳೆದುಕೊಂಡವರ ಪ್ರಕರಣವೇ ಬೇರೆ. ನಮ್ಮ ಜಮೀನನ್ನು ಕಾನೂನಿಗೆ ವಿರುದ್ಧವಾಗಿ ಪಡೆದುಕೊಂಡ ಪ್ರಕರಣವಿದು. ನಮ್ಮ ಜಮೀನಿಗೆ ಪರಿಹಾರ ಕೊಡಿ ಎಂದು ಪತ್ನಿ ಕೇಳಿದ್ದರು. ವಿಜಯನಗರದಲ್ಲೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಿರುವುದು ತಪ್ಪು ಎಂದು ಪ್ರಾಧಿಕಾರವೇ ಒಪ್ಪಿ ನಿವೇಶನ ನೀಡಿದೆ. ಹೀಗಿರುವಾಗ ಇದರಲ್ಲಿ ವಿವಾದವೇನಿದೆ” ಎಂದು ಪ್ರಶ್ನಿಸಿದರು.

“ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮವರೇ ಸಮರ್ಥರಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮದ ಕುರಿತು ಇಬ್ಬರು ಐಎಎಸ್‌ ಅಧಿಕಾರಿಗಳ ತಂಡದಿಂದ ತನಿಖೆ ಮಾಡಿಸುತ್ತಿದ್ದೇವೆ. ನಿವೇಶನಗಳು ಹಂಚಿಕೆ ಆಗಿರುವುದನ್ನು ಅಮಾನತಿನಲ್ಲಿಟ್ಟಿದ್ದೇವೆ. ಕಾನೂನು ಬಾಹಿರ ಎಂದು ವರದಿ ಬಂದರೆ, ಸಂಬಂಧಿಸಿದವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ” ಎಂದರು.

ರಾಮನಗರ ಜಿಲ್ಲೆ ಮರುನಾಮಕರಣ ವಿಚಾರವಾಗಿ ಮಾತನಾಡಿ, “ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ಮಂಗಳವಾರ ನನ್ನ ಬಳಿಗೆ ಬಂದು, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ, ಸಚಿವ ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡುತ್ತೇನೆ ಎಂದಿದ್ದೇನೆ” ಎಂದು ಹೇಳಿದರು.

‘ರಾಮನಗರ ಹೆಸರು ಬದಲಾಯಿಸಿದರೆ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ಹೆಸರು ಕಿತ್ತುಹಾಕುತ್ತೇವೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿ, “ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತು ಹಾಕುವುದು? ಅದೆಲ್ಲವೂ ಅವರ ಭ್ರಮೆ” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X