ಟ್ರೇಡ್‌ಮಾರ್ಕ್ ಪ್ರಕರಣ | 50 ಲಕ್ಷ ರೂ. ಪಾವತಿಸಲು ಪತಂಜಲಿಗೆ ಬಾಂಬೆ ಹೈಕೋರ್ಟ್ ಆದೇಶ

Date:

Advertisements

ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್‌ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಪತಂಜಲಿಗೆ ಕೋರ್ಟ್ ಆದೇಶಿಸಿತ್ತು. ಆದರೆ ಪತಂಜಲಿ ಆ ನಿಯಮ ಉಲ್ಲಂಘಿಸಿದೆ.

ಮಂಗಳಂ ಆರ್ಗಾನಿಕ್ಸ್ ಲಿಮಿಟೆಡ್‌ ಟ್ರೇಡ್‌ಮಾರ್ಕ್ ಉಲ್ಲಂಘನೆಯ ಆರೋಪ ಮಾಡಿದೆ. ಇದಾದ ಬಳಿಕ 2023ರ ಆಗಸ್ಟ್‌ನಲ್ಲಿ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಕರ್ಪೂರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಆದೇಶಿಸಿದೆ.

ಪತಂಜಲಿಯು ಜೂನ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕರ್ಪೂರ ಉತ್ಪನ್ನಗಳ ಮಾರಾಟಕ್ಕೆ ತಡೆಯಾಜ್ಞೆ ನೀಡುವ ಹಿಂದಿನ ಆದೇಶದ ಉಲ್ಲಂಘನೆಯನ್ನು ಒಪ್ಪಿಕೊಂಡಿದೆ ಎಂಬುವುದನ್ನು ಜುಲೈ 8ರಂದು ನ್ಯಾಯಮೂರ್ತಿ ಆರ್ ಐ ಚಾಗ್ಲಾ ಅವರ ಏಕ ಪೀಠವು ಗಮನಿಸಿದೆ.

Advertisements

ಇದನ್ನು ಓದಿದ್ದೀರಾ?  ಪತಂಜಲಿ ‘ಸೋನ್ ಪಾಪ್ಡಿ’ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ; ಮೂವರಿಗೆ ಜೈಲು

ಪತಂಜಲಿ 2023ರ ಆಗಸ್ಟ್ 30ರ ತಡೆಯಾಜ್ಞೆ ಆದೇಶದ ಇಂತಹ ನಿರಂತರ ಉಲ್ಲಂಘನೆಯನ್ನು ಮಾಡುವುದನ್ನು ಈ ನ್ಯಾಯಾಲಯವು ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿ ಚಾಗ್ಲಾ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶದ ಪ್ರತಿಯು ಬುಧವಾರ (ಜುಲೈ 10) ಲಭ್ಯವಾಗಿದೆ.

ತಡೆಯಾಜ್ಞೆ ಆದೇಶದ ಉಲ್ಲಂಘನೆ ಮಾಡಿದ ಕಾರಣಕ್ಕೆ ಮೊದಲು 50 ಲಕ್ಷ ರೂಪಾಯಿ ಮೊತ್ತವನ್ನು ಪಾವತಿ ಮಾಡುವಂತೆ ಪತಂಜಲಿಗೆ ನಿರ್ದೇಶನ ನೀಡುವುದು ಸೂಕ್ತ ಎಂದು ಬಾಂಬೆ ಹೈಕೋರ್ಟ್ ಪೀಠವು ಆದೇಶಿಸಿದೆ. ನಿಷೇಧಾಜ್ಞೆ ಜಾರಿಯಾದ ನಂತರ 49,57,861 ರೂಪಾಯಿ ಮೊತ್ತದ ಕರ್ಪೂರದ ಉತ್ಪನ್ನದ ಪೂರೈಕೆಯನ್ನು ಪತಂಜಲಿ ಮಾಡಿದೆ ಎಂದು ಅಫಿಡವಿಟ್‌ನಲ್ಲಿ ಪತಂಜಲಿ ನಿರ್ದೇಶಕ ರಜನೀಶ್ ಮಿಶ್ರಾ ತಿಳಿಸಿದ್ದಾರೆ.

ಇನ್ನು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 19ಕ್ಕೆ ಹೈಕೋರ್ಟ್ ಮುಂದೂಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X