ತುಮಕೂರು | ಮೃತ ಎಂಜಿನಿಯರ್‌ ಸಹಿ ನಿರಂತರ ದುರ್ಬಳಕೆ; ಗಂಭೀರ ಆರೋಪ 

Date:

Advertisements

ಮೃತ ಎಂಜಿನಿಯರ್‌ ಸಹಿ ನಿರಂತರ ದುರ್ಬಳಕೆಯಾಗುತ್ತಿದ್ದು, ಸರ್ಕಾರದ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಸಿರಾ ನಗರಸಭೆಯ ಸರ್ವ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಜಿಲ್ಲೆಯ ಸಿರಾ ನಗರಸಭೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಆಗ್ರಹ ಕೇಳಿಬಂದಿದ್ದು, “ಮೃತ ಎಂಜಿನಿಯರ್ ಸೇತುರಾಂ ಸಿಂಗ್ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದರೆ, ಸೇತುರಾಂ ಸಿಂಗ್ ಹೆಸರಲ್ಲಿ ಹಳೆಯ ಕಡತಗಳಿಗೆ ನಕಲಿ ಸಹಿ ಹಾಕಿ ಅನುದಾನ ದುರ್ಬಳಕೆ ಮಾಡಲಾಗಿದೆ. ಕೂಡಲೇ ದುರ್ಬಳಕೆಯನ್ನು ತಡೆಗಟ್ಟಬೇಕು” ಎಂದು ಆಗ್ರಹಿಸಿ ಮೃತ ಎಂಜಿನಿಯರ್ ಪತ್ನಿ ನಗರಸಭೆಗೆ ದೂರು ನೀಡಿದ್ದಾರೆ.

ನಗರಸಭೆ ಸದಸ್ಯರುಗಳಾದ ಅಜಯ್ ಕುಮಾರ್, ಲಕ್ಷ್ಮಿಕಾಂತ್, ಕೃಷ್ಣಪ್ಪ ಸೇರಿದಂತೆ ಹಲವು ಸದಸ್ಯರ ದೂರನ್ನು ಆಧಾರಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೆಹಲಿ ವಿಶೇಷ ಪ್ರತಿ‌ನಿಧಿ ಟಿ ಬಿ ಜಯಚಂದ್ರ, ಎಂಎಲ್‌ಸಿ ಚಿದಾನಂದ್ ಸಮ್ಮುಖದಲ್ಲೇ ಆರೋಪ ಕೇಳಿಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ವೈದ್ಯಕೀಯ ಕಾಲೇಜುಗಳಿಗೆ ದಂಡ; ಎನ್ಎಂಸಿಯ ಏಕಪಕ್ಷೀಯ ನಡೆಗೆ ಎಐಡಿಎಸ್‌ಒ ಕಂಡನೆ

ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಕೋಡಬೇಕೆಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒತ್ತಾಯಿಸಿದ್ದಾರೆ.

ಸಿರಾ ನಗರಸಭೆ ಅಧ್ಯಕ್ಷೆ ಪೂಜಾ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X