ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ ಬಸ್: 65 ಮಂದಿ ನಾಪತ್ತೆ, 7 ಭಾರತೀಯರು ಸಾವು

Date:

Advertisements

ನೇಪಾಳ ದಲ್ಲಿ ಇಂದು ಭೂಕುಸಿತವುಂಟಾಗಿ ಎರಡು ಬಸ್ಸುಗಳು ನದಿಗೆ ಉರುಳಿದ ಪರಿಣಾಮ ಪ್ರವಾಸಕ್ಕೆಂದು ತೆರಳಿದ 7 ಭಾರತೀಯರು ಮೃತಪಟ್ಟಿದ್ದಾರೆ.

ಚಿತ್ವಾನ್‌ ಜಿಲ್ಲೆಯ ನಾರಾಯಣ್ ಘಾಟ್ – ಮುಗ್‌ಲಿಂಗ್‌ ರಸ್ತೆಯಲ್ಲಿ ಭೂಕುಸಿತವುಂಟಾಗಿದೆ. ಇದೇ ಸಂದರ್ಭದಲ್ಲಿ 7 ಮಂದಿ ಭಾರತೀಯರು ಸೇರಿದಂತೆ 65 ಪ್ರಯಾಣಿಕರು ಎರಡು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದರು. ಭೂಕುಸಿತವು ಬಸ್ಸನ್ನು ಕೊಚ್ಚಿಕೊಂಡು ತ್ರಿಶೂಲಿ ನದಿಗೆ ತಳ್ಳಿದೆ. ಈ ಘಟನೆಯಿಂದ ಎಲ್ಲ 65 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಇವೆರೆಡರ ಒಂದು ಬಸ್ಸಿನಲ್ಲಿ 7 ಮಂದಿ ಭಾರತದ ಪ್ರವಾಸಿಗರು ಬಿರ್‌ಜುಂಗನಿಂದ ಕಠ್ಮಂಡುವಿಗೆ ತೆರಳುತ್ತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ರಷ್ಯಾ ಭೇಟಿ: ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಆಕ್ರೋಶ

ನಿರಂತರ ಮಳೆಯಿಂದ ಭೂಕುಸಿತ ಉಂಟಾದ ಪರಿಣಾಮ ನಾರಾಯಣ್ ಘಾಟ್ – ಕಠ್ಮಂಡು ರಸ್ತೆಯನ್ನು 15 ದಿನಗಳವರೆಗೆ ಬಂದ್‌ ಮಾಡಲಾಗಿದೆ ಎಂದು ರಸ್ತೆ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನೇಪಾಳದಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಹಲವು ಕಡೆ ಭೂಕುಸಿತ ಉಂಟಾಗಿ ಹಲವಾರು ರಸ್ತೆಗಳು ಹಾಗೂ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಘಟನಾ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣದಿಂದ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭೂಕುಸಿತದಿಂದ ಕಲ್ಲುಮಣ್ಣುಗಳ ಅವಶೇಷಗಳು ರಸ್ತೆಯುದ್ದಕ್ಕೂ ಹರಡಿರುವುದರಿಂದ ನಾರಾಯಣ್ ಘಾಟ್ – ಮುಗ್‌ಲಿಂಗ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X