‘ನನ್ನನ್ನು ಭೇಟಿ ಮಾಡಬೇಕೆಂದರೆ ಆಧಾರ್‌ ಕಾರ್ಡ್‌ ತನ್ನಿ’; ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಸಂಸದೆ ಕಂಗನಾ ಹೇಳಿಕೆ

Date:

Advertisements

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, “ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಆಧಾರ್ ಕಾರ್ಡ್‌ಅನ್ನು ಜೊತೆಗೆ ತರಬೇಕು. ಮಾತ್ರವಲ್ಲದೆ, ತಮ್ಮ ಸಮಸ್ಯೆ ಆಥವಾ ಭೇಟಿಯ ಉದ್ದೇಶವನ್ನು ಪತ್ರದ ಮೂಲಕ ತಿಳಿಸಬೇಕು” ಎಂದು ಹೇಳಿದ್ದಾರೆ.

“ಹಿಮಾಚಲ ಪ್ರದೇಶವು ಹೆಚ್ಚು ಪ್ರವಾಸಿಗರು ಬರುವ ಸ್ಥಳವಾಗಿದೆ. ಆದ್ದರಿಂದ, ಮಂಡಿ ಪ್ರದೇಶದಿಂದ ಆಧಾರ್ ಕಾರ್ಡ್ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ. ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ, ಕಲಸಗಳ ಬಗ್ಗೆ ಪತ್ರದಲ್ಲಿ ಬರೆದು ಕೊಡಬೇಕು” ಎಂದು ಹೇಳಿದ್ದಾರೆ.

Advertisements

“ಹಿಮಾಚಲದ ಉತ್ತರ ಭಾಗದ ಜನರು ತನ್ನನ್ನು ಭೇಟಿಯಾಗಲು ಬಯಸಿದರೆ, ಅವರು ಮನಾಲಿಯಲ್ಲಿರುವ ತಮ್ಮ ಮನೆಗೆ ಭೇಟಿ ನೀಡಬಹುದು. ಮಂಡಿಯಲ್ಲಿರುವ ಜನರು ನಗರದ ತಮ್ಮ ಕಚೇರಿಗೆ ಬರಬಹುದು” ಎಂದು ಅವರು ಹೇಳಿದ್ದಾರೆ.

ಕಂಗನಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

“ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X