ಬಂಟ್ವಾಳ | ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆ ಕಾರ್ಯಕ್ರಮ

Date:

Advertisements

ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು.

ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಮಾತನಾಡಿ, “ಸುಜೀರು ಶಾಲೆಗೆ ಶಶಿಮಂಗಳ ರೀತಿಯ ಮುಖ್ಯೋಪಾಧ್ಯಾಯಿನಿ ಸಿಗಲು ಸಾಧ್ಯವಿಲ್ಲ. ಶಶಿಮಂಗಳ ಅವರು ವಿದ್ಯಾರ್ಥಿಗಳು ಹಾಗೂ ಪಾಲಕರ ಮನಗೆದ್ದಿದ್ದಾರೆ. ಅವರು ಇಂದಿನ ಶಿಕ್ಷಕರಿಗೆ ಮಾದರಿ” ಎಂದರು.

ಎಸ್‌ಡಿಎಂಸಿಯ ಮಾಜಿ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ಮಾತನಾಡಿ, “ಶಶಿಮಂಗಳ ಅವರು ಸಹನೆ ಸಾಧನೆ ಉಳ್ಳವರು. ವಿದ್ಯಾರ್ಥಿಗಳನ್ನು ಒಳ್ಳೆಯ ನಾಗರಿಕರನ್ನಾಗಿ ಮಾಡಿದ್ದಾರೆ. ರಾಷ್ಟ್ರಮಟ್ಟದ ಕ್ರೀಡೆಗೆ ಪ್ರೋತ್ಸಾಹ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

Advertisements

ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, “ಶಶಿಮಂಗಳ ಅವರು ಇಡೀ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕಿ” ಎಂದರು.

ಸುಜೀರು ಶಾಲೆ

ನಿವೃತ್ತ ಶಿಕ್ಷಕ ಮೊಹಮ್ಮದ್ ತುಂಬೆ ಮಾತನಾಡಿ, “ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರವಿದೆ. ಶಶಿಮಂಗಳ ಅವರು ಮೃದು ಸ್ವಭಾವದವರು. ಅಭಿವೃದ್ಧಿ ದೃಷ್ಟಿಯಲ್ಲಿ ಕೆಲಸ ಕಾರ್ಯ ಮಾಡಿದ್ದಾರೆ” ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಶಶಿಮಂಗಳ, “ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ನಾನು ಶಿಕ್ಷಕಿಯಾಗುವ ಗುರಿಯನ್ನು ಇಟ್ಟುಕೊಂಡಿಲ್ಲ. ಶಿಕ್ಷಕ ವೃತ್ತಿಯು ಜೀವಂತ ಇರುವ ವ್ಯಕ್ತಿಗಳ ಜೊತೆ ಮಾಡುವ ವೃತ್ತಿ” ಎಂದರು.

bilkoduge

“ಶಿಕ್ಷಕರಲ್ಲಿನ ಸಂಸ್ಕಾರ, ಸಂಸ್ಕೃತಿ, ಸಮಯಪಾಲನೆ, ಸೌಮ್ಯತೆ, ಪ್ರಾಮಾಣಿಕತೆಯಂತಹ ಗುಣಗಳನ್ನು ಯುವಪೀಳಿಗೆಗೆ ಧಾರೆ ಎರೆಯಬೇಕು. ಭವಿಷ್ಯ ಭಾರತದಲ್ಲಿನ ಉತ್ತಮ ಸಮಾಜದ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಬೇಕು” ಎಂದು ಸಲಹೆ ನೀಡಿದರು.

ಪುದು ಗ್ರಾಮ ಪಂಚಾಯತ್ ಅಧ್ಯಕ್ಷೆ ರಶೀದಾ, ಉಪಾಧ್ಯಕ್ಷ ಇಕ್ಬಾಲ್ ಸುಜೀರ್, ಟಿಕೆ ಬಶೀರ್, ಅಬ್ದುಲ್ ಮಜೀದ್, ಭಾಸ್ಕರ್ ರೈ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X