ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

Date:

Advertisements

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮೇಲೆ ದಾಳಿ ನಡೆಯುತ್ತಿದ್ದಂತೆ ಎಕ್ಸ್ ಪೋಸ್ಟ್ ಮಾಡಿರುವ ಮೋದಿಗೆ ಮಣಿಪುರ ವಿಚಾರದ ಬಗ್ಗೆ ಮಾತನಾಡಲು ಒಂದು ವರ್ಷಗೂ ಅಧಿಕ ಸಮಯ ಬೇಕಾಯಿತೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಟ್ರಂಪ್ ಹತ್ಯೆ ಪ್ರಯತ್ನ ನಡೆದ ಬಳಿಕ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಹಾಗೆಯೇ, “ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೆರಿಕದ ಜನರಿಗಾಗಿ ನಮ್ಮ ಪ್ರಾರ್ಥನೆ” ಎಂದೂ ಕೂಡಾ ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಪ್ರಧಾನಿ ಅಮೆರಿಕದ ಮಾಜಿ ಅಧ್ಯಕ್ಷರ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಕ್ಕೆ ಧನ್ಯವಾದ ತಿಳಿಸಿರುವ ನೆಟ್ಟಿಗರು ಮಣಿಪುರ ಮತ್ತು ದೇಶದ ಹಲವಾರು ವಿಚಾರಗಳ ಬಗ್ಗೆ ಧನಿ ಎತ್ತದ ಪ್ರಧಾನಿ ಮೋದಿಗೆ ಪಾಠ ಮಾಡಿದ್ದಾರೆ.

“ಮಣಿಪುರ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಿ ಇಲ್ಲಿಯವರೆಗೂ ಅಲ್ಲಿಗೆ ಭೇಟಿ ನೀಡಿಲ್ಲ. ಆದರೆ ಬಂಡವಾಳಶಾಹಿಯೊಬ್ಬನ ಮಗನ ಮದುವೆಯ ಹೆಸರಿನಲ್ಲಿ ನಡೆಯುತ್ತಿರುವ ಅಶ್ಲೀಲ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ. ಎಂತಹ ದೌರ್ಭಾಗ್ಯ ಈ ದೇಶಕ್ಕಿದೆ” ಎಂದು ನೆಟ್ಟಿಗರೊಬ್ಬರು ಟೀಕಿಸಿದ್ದಾರೆ.

“ಪ್ರಧಾನಿ ಮಣಿಪುರದಲ್ಲಿಯೂ ಹಿಂಸಾಚಾರ ನಡೆಯುತ್ತಿದೆ. ಆದರೆ ಅದರ ಬಗ್ಗೆ ಮಾತ್ರ ಸುಮಾರು ತಿಂಗಳುಗಳ ಕಾಲ ಮಾತನಾಡಲಿಲ್ಲ” ಎಂದು ಮತ್ತೋರ್ವ ನೆಟ್ಟಿಗರು ಹೇಳಿದ್ದಾರೆ.

“ನೀವು ಮಣಿಪುರದ ಬಗ್ಗೆ ಪೋಸ್ಟ್ ಮಾಡಬೇಕು. ನೀವು ಗೂಂಡಾಗಳಿಂದ ಸುಡಲ್ಪಟ್ಟ ಬಂಗಾಳಿ ಮಹಿಳೆಯರ ಬಗ್ಗೆ ಮಾತನಾಡಬೇಕಿತ್ತು. ಹರಿಯಾಣ ಪಂಜಾಬ್ ರೈತರ ಸಮಸ್ಯೆಯ ಬಗ್ಗೆಯೂ ಪೋಸ್ಟ್ ಮಾಡಬೇಕಿತ್ತು. ನೀವು ಉತ್ತರ ಪ್ರದೇಶದಲ್ಲಿ ದಲಿತರ ಸಮಸ್ಯೆಗಳಿಗೆ ಪ್ರತಿಕ್ರಿಯಿಸಬೇಕು. ನೀವು ಭಾರತದಲ್ಲಿ ಎಲ್ಲಿ ಏನೂ ನಡೆದರೂ ಪ್ರತಿಕ್ರಿಯಿಸಬೇಕಿತ್ತು. ಒಮ್ಮೆ ಆಲೋಚಿಸಿ ಮೋದಿ ಅವರೇ” ಎಂದು ಸಂತೋಷ್ ರೆಡ್ಡಿ ಎಂಬ ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

“ಮೋದಿ ಅವರೇ ಪ್ರತಿಯೊಬ್ಬರನ್ನು & ಎಲ್ಲರನ್ನು ಸ್ನೇಹಿತರೆಂದು ಕರೆಯುವುದನ್ನು ನಿಲ್ಲಿಸಿ. ಪ್ರತಿಯೊಬ್ಬರನ್ನೂ ಸ್ನೇಹಿತ ಎಂದು ಹೇಳದೆಯೇ ನೀವು ರಾಜತಾಂತ್ರಿಕತೆಯನ್ನು ಮಾಡಬಹುದು” ಎಂದು ಮತ್ತೋರ್ವ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

ಮಣಿಪುರದಲ್ಲಿ 2023ರ ಮೇ ತಿಂಗಳಿನಲ್ಲಿ ಹಿಂಸಾಚಾರ ಆರಂಭವಾಗಿದ್ದು ಪ್ರಧಾನಿ ಮೋದಿ ಒಂದು ವರ್ಷಗಳ ಕಾಲ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಎಕ್ಸ್‌ನಲ್ಲಿಯೂ ಪೋಸ್ಟ್ ಮಾಡಿರಲಿಲ್ಲ. ಇತ್ತೀಚೆಗೆ ನಡೆದ ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ ವಿಪಕ್ಷ ನಾಯಕರುಗಳ ಒತ್ತಡ ಅಧಿಕವಾದ ಬಳಿಕ ಮೋದಿ ಮಣಿಪುರದ ಬಗ್ಗೆ ಮೌನ ಮುರಿದಿದ್ದಾರೆ. ಆದರೆ ಈವರೆಗೂ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X