1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

Date:

Advertisements

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ ಕೇಂದ್ರ ಬಜೆಟ್ ಅನ್ನು ಜುಲೈ 23ರಂದು ಮಂಡಿಸಲಿದ್ದಾರೆ. ಇದು ಪೂರ್ಣ ಬಜೆಟ್ ಆಗಿರಲಿದೆ. ಹಿಂದಿನ ಸರ್ಕಾರದಲ್ಲಿಯೂ ಕೇಂದ್ರ ವಿತ್ತ ಸಚಿವೆಯಾಗಿದ್ದ ನಿರ್ಮಲಾ ಈ ವರ್ಷದ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ಅನ್ನು ಮಂಡಿಸಿದ್ದರು.

ಕೇಂದ್ರ ಹಣಕಾಸು ಸಚಿವಾಲಯವು ಈಗಾಗಲೇ ಬಜೆಟ್ ತಯಾರಿಯನ್ನು ಪ್ರಾರಂಭಿಸಿದೆ. ಸಭೆಗಳನ್ನು ನಡೆಸುತ್ತಿದೆ. ಆದರೆ, ಇವೆಲ್ಲವೂ ಕೂಡಾ ಅತೀ ರಹಸ್ಯವಾಗಿ ನಡೆಯುವಂತಹ ಪ್ರಕ್ರಿಯೆಗಳಾಗಿದೆ. ಸದ್ಯಕ್ಕೆ, ಆಯ್ದ ಕೆಲವು ಜನರಿಗೆ ಮಾತ್ರ ಈ ಬಜೆಟ್ ಸಂಬಂಧಿತ ಮಾಹಿತಿ ಇರುತ್ತದೆ.

ಆದರೆ, ಕೇಂದ್ರ ಬಜೆಟ್ ಮುದ್ರಣ ಪ್ರಕ್ರಿಯೆಯಲ್ಲಿ ಇಷ್ಟೊಂದು ರಹಸ್ಯ ಯಾಕೆ ಎಂದು ನಿಮಗನಿಸಬಹುದು. ಇದಕ್ಕೆ ಮುಖ್ಯ ಕಾರಣವೂ ಇದೆ. ಆ ಕಾರಣವೇ ಹಲವು ವರ್ಷಗಳ ಹಿಂದೆ ಕೇಂದ್ರ ಬಜೆಟ್ ಸೋರಿಕೆಯಾಗಿರುವುದಾಗಿದೆ.

Advertisements

ಸ್ವತಂತ್ರ ಭಾರತದ ಮೊದಲ ಬಜೆಟ್ (1947-1948) ಅನ್ನು ಕೇಂದ್ರ ಹಣಕಾಸು ಸಚಿವ ಸರ್ ಆರ್ ಕೆ ಷಣ್ಮುಖಂ ಚೆಟ್ಟಿ ಮಂಡಿಸಿದರು. ಅದನ್ನು ಪ್ರಸ್ತುತಪಡಿಸುವ ಮೊದಲು, ಯುಕೆ ಚಾನ್ಸೆಲರ್ ಆಫ್ ಎಕ್ಸೆಕರ್ ಹಗ್ ಡಾಲ್ಟನ್ ಅವರು ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ತೆರಿಗೆಗಳಲ್ಲಿನ ಬದಲಾವಣೆಗಳ ಬಗ್ಗೆ ಪತ್ರಕರ್ತರಿಗೆ ತಿಳಿಸಿದ್ದರು.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ 2024 | ಗ್ರಾಮೀಣ ಭಾರತ, ಉದ್ಯೋಗದ ಮೇಲೆ ಕೇಂದ್ರೀಕರಿಸುವ ಸಾಧ್ಯತೆ: ಗೋಲ್ಡ್‌ಮನ್ ಸ್ಯಾಕ್ಸ್

ಸಂಸತ್ತಿನಲ್ಲಿ ಬಜೆಟ್ ಮಂಡನೆಗೂ ಮುನ್ನ ಈ ಮಾಹಿತಿಯನ್ನು ಪ್ರಕಟಿಸಲಾಗಿತ್ತು. ಇದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸಿತ್ತು. ಕೊನೆಗೆ, ಡಾಲ್ಟನ್ ರಾಜೀನಾಮೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಆದರೆ, ಬಜೆಟ್ ಸೋರಿಕೆಯಾಗಿರುವುದು ಅದೊಂದೇ ಬಾರಿ ಅಲ್ಲ. 1950ರಲ್ಲಿಯೂ ಕೇಂದ್ರ ಬಜೆಟ್‌ನ ಒಂದು ಭಾಗ ಸೋರಿಕೆಯಾಗಿತ್ತು. ಬಜೆಟ್ ಕಾಗದಗಳ ಮುದ್ರಣದ ಸಮಯದಲ್ಲಿ ಬಜೆಟ್‌ನ ಅಂಶಗಳು ಸೋರಿಕೆಯಾಗಿದ್ದವು. ಪರಿಣಾಮ, ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ ಆಗಿನ ಹಣಕಾಸು ಸಚಿವ ಜಾನ್ ಮಥಾಯ್ ಅಧಿಕಾರದಿಂದ ಕೆಳಗಿಳಿಯಬೇಕಾಯಿತು.

ಆಗ ಬಜೆಟ್ ಕಾಗದಗಳ ಮುದ್ರಣವನ್ನು ರಾಷ್ಟ್ರಪತಿ ಭವನದಲ್ಲಿ ಮಾಡಲಾಗುತ್ತಿತ್ತು. ಬಜೆಟ್ ಸೋರಿಕೆಯಾದ ನಂತರ ಮುದ್ರಣ ಸ್ಥಳವನ್ನು ಮಿಂಟೋ ರಸ್ತೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು. ದೆಹಲಿಯ ನಾರ್ತ್ ಬ್ಲಾಕ್ ನೆಲಮಾಳಿಗೆಯಲ್ಲಿರುವ ಸೆಕ್ರೆಟರಿಯೇಟ್ ಕಟ್ಟಡವು 1980ರಿಂದ ಬಜೆಟ್ ಮುದ್ರಣಕ್ಕೆ ಶಾಶ್ವತ ಸ್ಥಳವಾಗಿದೆ.

347.5 ಕೋಟಿ ರೂಪಾಯಿ ಆದಾಯ ಮತ್ತು 337.88 ಕೋಟಿ ರೂಪಾಯಿ ವೆಚ್ಚವನ್ನು ಹೊಂದಿದ್ದ 1950ರ ಬಜೆಟ್ – ಆದಾಯ ಮತ್ತು ವೆಚ್ಚದ ನಡುವೆ ಆದಾಯ ಉಳಿತಾಯವಾಗಿದ್ದ (surplus) ಮೊದಲ ಬಜೆಟ್ ಆಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X