ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

Date:

Advertisements

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-1 ಮೂಲಕ ಜಯಗಳಿಸಿತು.

ಹಾರಾರೆ ಸ್ಪೋರ್ಟ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 168 ರನ್ನುಗಳ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ ಭಾರತದ ಬೌಲರ್‌ಗಳ ದಾಳಿಗೆ ಕುಸಿದು 125 ರನ್‌ಗಳಿಗೆ ಆಲೌಟ್‌ ಆಯಿತು.

ವೇಗಿ ಮುಖೇಶ್ ಕುಮಾರ್ 22/4, ಶಿವಂ ದುಬೆ 25/2 ಹಾಗೂ ತುಷಾರ್‌ ದೇಶಪಾಂಡೆ, ವಾಷಿಂಗ್ಟನ್‌ ಸುಂದರ್ ಹಾಗೂ ಅಭಿಷೇಕ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ಗೆಲುವಿನ ರೂವಾರಿಗಳಾದರು.

Advertisements

ಜಿಂಬಾಬ್ವೆ ಪರ ಡಿಯೋನ್‌ ಮೈಯರ್ಸ್ 34, ತದಿವನ್ಷೆ ಮರುಮಣಿ 27 ಹಾಗೂ ಫರಾಜ್‌ ಅಕ್ರಮ್ 27 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರ್ಯಾರು 10ರ ಗಡಿ ದಾಟಲಿಲ್ಲ.

ಈ ಸುದ್ದಿ ಓದಿದ್ದೀರಾ? ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಮೊದಲು ಟಾಸ್‌ ಗೆದ್ದ ಜಿಂಬಾಬ್ವೆ ಟಿಂ ಇಂಡಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.ಕಳೆದ ಪಂದ್ಯಗಳಲ್ಲಿ ಮಿಂಚಿದ್ದ ಯಶಸ್ವಿ ಜೈಸ್ವಾಲ್(12), ನಾಯಕ ಶುಭಮನ್‌ ಗಿಲ್(13) ಹಾಗೂ ಅಭಿಷೇಕ್‌ ಶರ್ಮಾ (14) ಬೇಗನೆ ಪೆವಲಿಯನ್‌ಗೆ ತೆರಳಿದರು.

ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಅವರ ಉಪಯುಕ್ತ ಅರ್ಧ ಶತಕ ತಂಡ ಗೌರವಾನ್ವಿತ ಮೊತ್ತ ಕಲೆ ಹಾಕಲು ಕಾರಣವಾಯಿತು. 45 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 1 ಬೌಂಡರಿಯಿಂದಿಗೆ ಸ್ಯಾಮ್ಸನ್ 58 ಗಳಿಸಿದರು.

ಸಂಜುಗೆ ರಿಯಾನ್‌ ಪರಾಗ್‌ 22, ಶಿವಂ ದುಬೆ 26 ಉತ್ತಮ ಬೆಂಬಲ ನೀಡಿದರು. ಕೊನೆಯಲ್ಲಿ ಬಂದ ರಿಂಕು ಸಿಂಗ್‌ ಅಜೇಯ 11 ರನ್‌ ಗಳಿಸಿದ ಪರಿಣಾಮ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 167 ಮೊತ್ತ ಕಲೆ ಹಾಕಲು ಕಾರಣರಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X