ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ ಗರಿಮಾ ಪಂವಾರ್ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯತಿಯಿಂದ ಗ್ರಾಮಗಳಲ್ಲಿ ಚರಂಡಿ ಸೇರಿದಂತೆ ಸ್ವಚ್ಛತೆಗೆ ಕ್ರಮವಹಿಸಲು ಸೂಚಿಸಿದರೂ ನಿರ್ಲಕ್ಷಿಸಿದ್ದು ಹಾಗೂ ಗ್ರಾಮದಲ್ಲಿ ಅಗತ್ಯ ಜಾಗೃತಿ ಮೂಡಿಸದೆ ಕರ್ತವ ಲೋಪ ಎಸಗಿದ್ದರು.
ತಾಲೂಕು ಪಂಚಾಯತ್ ಇಒ ನೀಡಿದ ವರದಿಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗ್ರಾಮದ ಮೂರು ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಅವುಗಳಿಂದ ನೀರು ಸರಬರಾಜು ಮಾಡದಂತೆ ಮತ್ತು ಸೋರಿಕೆಯ ಪೈಪ್ಲೈನ್ ದುರಸ್ತಿಗೆ ಸೂಚಿಸಿದರೂ ಪಿಡಿಒ ಕ್ರಮ ವಹಿಸದೇ ಕರ್ತವ್ಯ ಲೋಪ ಎಸಗಿದ ಹಿನ್ನಲೆ ಪಿಡಿಒ ಮಲ್ಲಾರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.