ರಾಜಸ್ಥಾನ | ‘ಖೀರ್’ ಮಾಡಲು ಹಾಲಿನ ವಾಹನವನ್ನೇ ಲೂಟಿಗೈದ ವೈದ್ಯರು! ವಿಡಿಯೋ ವೈರಲ್

Date:

Advertisements

ಐದಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ತಂಡವು ಹಾಲಿನ ವಾಹನವನ್ನೇ ಲೂಟಿಗೈದ ಘಟನೆ ರಾಜಸ್ಥಾನದ ಜೋಧ್‌ಪುರ ನಗರದ ಮಥುರಾದಾಸ್ ಮಾಥುರ್ ಆಸ್ಪತ್ರೆ ಬಳಿ ಭಾನುವಾರ ನಡೆದಿದೆ. ಈ ವೈದ್ಯರು ಖೀರ್ ಮಾಡಲೆಂದು ಹಾಲಿನ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಸ್ಥಳೀಯ ವರದಿಗಳ ಪ್ರಕಾರ, 5ಕ್ಕೂ ಹೆಚ್ಚು ಎಂಬಿಬಿಎಸ್ ವಿದ್ಯಾರ್ಥಿಗಳ ಗುಂಪು ಭಾನುವಾರ ಮುಂಜಾನೆ 4 ಗಂಟೆಗೆ ಸರಸ್ ಮಿಲ್ಕ್ ವ್ಯಾನ್ ಮಾಲೀಕ ಸುಖದೇವ್ ವಿಷ್ಣೋಯ್ ಅವರು ಚಲಾಯಿಸುತ್ತಿದ್ದ ಹಾಲಿನ ವಾಹನವನ್ನು ತಡೆದು ನಿಲ್ಲಿಸಿದೆ. ಬಳಿಕ ಸುಖದೇವ್ ಜೊತೆ ಅನುಚಿತವಾಗಿ ವರ್ತಿಸಿ ಹಾಲು ಇದ್ದ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಈ ಬಗ್ಗೆ ಪೊಲೀಸ್ ಅಧಿಕಾರಿ ದೇವೇಂದ್ರ ಸಿಂಗ್ ದೇವ್ಡಾ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ದಿನವೊಂದಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದನೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬಂಧಿತರನ್ನು ಡಾ ಎಸ್‌ಎನ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ ಧೋರಿಮಣ್ಣ ಗ್ರಾಮದ 22 ವರ್ಷದ ವಿಕಾಸ್ ವಿಷ್ಣೋಯ್, ಸೇಡ್ವಾದ ಓಗಾಲಾ ನಿವಾಸಿ 23 ವರ್ಷದ ಓಂಪ್ರಕಾಶ್ ಜಾಟ್, ಗುಡಾ ಮಲಾನಿಯ ದಬರ್ ಗ್ರಾಮದ ನಿವಾಸಿ 22 ವರ್ಷದ ಮಹೇಶ್ ವಿಷ್ಣೋಯ್ ಎಂದು ಗುರುತಿಸಲಾಗಿದೆ. ಮೂವರು ಕೂಡಾ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ.

ಈ ಬಗ್ಗೆ ಸುಖದೇವ್ ವಿಷ್ಣೋಯ್ ವಾಹನದಲ್ಲಿದ್ದ 24 ಲೀಟರ್ ಹಾಲಿನ ಎರಡು ಕ್ರೇಟ್‌ಗಳ ಮತ್ತು ಹಣವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಈ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಕಾರ್ಯಾಚರಣೆಗಿಳಿದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾಗಿಯಾಗಿರುವ ಇತರ 2 ಮಂದಿಗಾಗಿ ಶೋಧ ನಡೆಯುತ್ತಿದೆ. ಹೆಚ್ಚಿನ ತನಿಖೆಯ ನಂತರ ಹಾಲಿನ ವಾಹನವನ್ನು ಪಾಲ್ ರಸ್ತೆಯಲ್ಲಿ ಬಿಟ್ಟುಹೋಗಿರುವುದು ಕಂಡುಬಂದಿದೆ. ಆರೋಪಿಗಳ ಮೇಲೆ ದರೋಡೆ ಮತ್ತು ಶಾಂತಿ ಕದಡುವ ಪ್ರಕರಣಗಳು ದಾಖಲಾಗಿವೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X