ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ ಬರೆಯುವವರು ಸಿಇಟಿ ಬರೆಯಲು ಅವಕಾಶ

Date:

Advertisements
  • ಸಿಇಟಿಗೆ ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ
  • ಸಿಇಟಿಗೆ ಹಾಜರಾದರೆ ಪೂರಕ ಪರೀಕ್ಷೆಯ ಅಂಕ ಪರಿಗಣನೆ

ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಗಳಿಸಲಾಗಿದೆ ಎಂದು ಪೂರಕ ಪರೀಕ್ಷೆ ಎದುರಿಸಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಹ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯಬಹುದೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಎಸ್‌ಇಎಬಿ)ದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕಗಳು ಬಂದಿದೆ ಎಂದು ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ‘ಸಿಇಟಿ’ಗೆ ಹಾಜರಾಗಬೇಕು ಎಂದು ಪಿಯು ಮಂಡಳಿ ಹೇಳಿದೆ.

ಸಿಇಟಿ-2023ಕ್ಕೆ ನೋಂದಣಿ ಮಾಡಿ ಶುಲ್ಕ ಪಾವತಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ 2023ರ ಮೇ 20 ಮತ್ತು 21ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಎದುರಿಸುವವರಿಗೆ ಮಾತ್ರ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ, ಸೀಟು ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧೀಕಾರ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ?: ಜೂ.5ರಿಂದ ಸಿಯುಇಟಿ-ಪಿಜಿ ಪರೀಕ್ಷೆ

ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಆಯಾ ವರ್ಷದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರೆ ಮಾತ್ರ ನಿಯಮಗಳ ಪ್ರಕಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೊಂಡಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ದಿನದಿಂದ ನೋಂದಣಿ ಪ್ರಾರಂಭವಾಗಿದ್ದು, ದಂಡವಿಲ್ಲದೆ ಏಪ್ರಿಲ್ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಇದೀಗ ದಂಡ ಪಾವತಿಯೊಂದಿಗೆ ಏಪ್ರಿಲ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೇ 2 ಅರ್ಜಿ ಸಲ್ಲಿಕೆಗೆ ಅಂತಿಮ ದಿನವೆಂದು ಕೆಎಸ್‌ಇಎಬಿ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

Download Eedina App Android / iOS

X