ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

Date:

Advertisements

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ) ಹಾಗೂ ಅಧ್ಯಕ್ಷ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವು ಜುಲೈ 19ರ ಸಂಜೆ 7ಕ್ಕೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ʼಬ್ಯಾರಿ ಭವನ’ದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಫರೀದ್‌ ಸಮಾರಂಭ ಉದ್ಘಾಟಿಸಲಿದ್ದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್.‌ ಅಧ್ಯಕ್ಷತೆ ವಹಿಸಲಿದ್ದಾರೆ.

ಸಚಿವರಾದ ಶಿವರಾಜ್‌ ತಂಗಡಗಿ, ಕೆ.ಜೆ. ಜಾರ್ಜ್‌, ಬಿ.ಝಡ್‌. ಝಮೀರ್‌ ಅಹ್ಮದ್‌ ಖಾನ್‌, ದಿನೇಶ್‌ ಗುಂಡೂರಾವ್‌, ರಹೀಂ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಶಾಸಕರಾದ ಎನ್.‌ ಎ. ಹ್ಯಾರಿಸ್‌, ರಿಝ್ವಾನ್‌ ಅರ್ಷದ್‌ ಹಾಗೂ ಮಾಜಿ ಶಾಸಕ ಬಿ.ಎಂ. ಫಾರೂಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ, ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisements

ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಬೆಂಗಳೂರಿನ ಬ್ಯಾರಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ರಾಜೇಶ್‌ ಜಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

beary bhavana
ಹೆಚ್‌ಬಿಆರ್ ಲೇಔಟ್‌ನಲ್ಲಿರುವ ʼಬ್ಯಾರಿ ಭವನ’
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X