ಜುಲೈ 20 ರಂದು ನೀಟ್ – ಯುಜಿ ಫಲಿತಾಂಶ ಪ್ರಕಟಿಸಿ: ಎನ್‌ಟಿಎಗೆ ಸುಪ್ರೀಂ ನಿರ್ದೇಶನ

Date:

Advertisements

ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್‌ – ಯುಜಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಫಲಿತಾಂಶವನ್ನು ಅಭ್ಯರ್ಥಿಗಳ ಗುರುತನ್ನು ಮರೆಮಾಡಿ ನಗರವಾರು ಹಾಗೂ ಕೇಂದ್ರವಾರು ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರ ಪೀಠ ನೀಟ್ ಯುಜಿ ಪರೀಕ್ಷೆಯ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿತು.

Advertisements

ವಿಚಾರಣೆಯ ಸಮಯದಲ್ಲಿ ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ನರೇಂದ್ರ ಹೂಡ ಹಾಜರಿದ್ದರು. ಸುಪ್ರೀಂ ಪೀಠವು ಎರಡೂ ಕಡೆಯ ವಿಚಾರಣೆಗಳನ್ನು ಆಲಿಸಿತು.

ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ

ನೀಟ್‌ – ಯುಜಿ 2024 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮ ಹಾಗೂ ಉತ್ತರ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 40 ಅರ್ಜಿಗಳ ವಿಚಾರಣೆ ನಡೆಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಹಿರಿಯ ವಕೀಲರಾದ ನರೇಂದ್ರ ಹೂಡ ಹಾಗೂ ಪ್ರತಿನಿಧಿಸಿದ್ದ ಅರ್ಜಿದಾರರಿಗೆ ಸೂಚನೆ ನೀಡಿದರು.

ದೇಶಾದ್ಯಂತ ಸರ್ಕಾರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳ ಸಂಖ್ಯೆಯ ಬಗ್ಗೆ ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿಗಳು ಹೂಡ ಅವರನ್ನು ಪ್ರಶ್ನಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ಸೀಟುಗಳಿದ್ದು, ಒಂದು ವೇಳೆ ಮರು ಪರೀಕ್ಷೆ ನಡೆಸಿದರೆ ಒಟ್ಟು 23 ಲಕ್ಷ ಅಭ್ಯರ್ಥಿಗಳಲ್ಲಿ ಈಗ ಅಕ್ರಮವಾಗಿ ಪ್ರವೇಶ ಪಡೆದಿರುವ ಹಲವು ಮಂದಿಗೆ ಸೀಟು ಲಭಿಸುವುದಿಲ್ಲ. ಹಲವು ಪ್ರಮಾಣಿಕ ಅಭ್ಯರ್ಥಿಗಳು ಪ್ರವೇಶ ಪಡೆಯಲಿದ್ದಾರೆ ಎಂದು ಪೀಠಕ್ಕೆ ಮನವರಿಕೆ ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ನಾವು ಮರು ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ವಿಚಾರಣೆಯನ್ನು(ಜುಲೈ 22) ಮುಂದುವರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X