ಉತ್ತರ ಪ್ರದೇಶ ರೈಲು ದುರಂತಕ್ಕೆ ಪ್ರಧಾನಿ, ರೈಲ್ವೆ ಸಚಿವರ ವಿರುದ್ಧ ಖರ್ಗೆ ಆಕ್ರೋಶ

Date:

Advertisements

ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನೆಯ ಸಂಪೂರ್ಣ ಹೊಣೆಹೊರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿರುವುದು ಮೋದಿ ಸರ್ಕಾರವು ರೈಲು ಸುರಕ್ಷತೆಯನ್ನು ಹೇಗೆ ವ್ಯವಸ್ಥಿತವಾಗಿ ಅಪಾಯಕ್ಕೆ ಸಿಲುಕಿಸಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ಪ್ರೆಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮೃತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಒಂದು ತಿಂಗಳ ಹಿಂದೆ, ಸೀಲ್ದಾ-ಅಗರ್ತಲಾ ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲು ಡಿಕ್ಕಿ ಹೊಡೆದು 11 ಜನರು ಪ್ರಾಣ ಕಳೆದುಕೊಂಡಿದ್ದರು. ಸ್ವಯಂ ಚಾಲಿತ ಸಿಗ್ನಲ್ ವೈಫಲ್ಯ, ಕಾರ್ಯಾಚರಣೆ ನಿರ್ವ ಹಣೆಯಲ್ಲಿನ ಹಲವು ಹಂತಗಳಲ್ಲಿ ಇರುವ ಲೋಪಗಳು ಮತ್ತು ಲೊಕೊ ಪೈಲಟ್ ಮತ್ತು ರೈಲು ವ್ಯವಸ್ಥಾಪಕರೊಂದಿಗೆ ವಾಕಿ – ಟಾಕಿಯಂತಹ ನಿರ್ಣಾಯಕ ಸುರಕ್ಷತಾ ಸಾಧನಗಳ ಲಭ್ಯತೆಯಿಲ್ಲದಿರುವುದು ಅಪಘಾತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ. ಸ್ವಪ್ರಚಾರಕ್ಕಾಗಿ ಯಾವುದೇ ಅವಕಾಶವನ್ನು ಬಿಡದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವರು ಭಾರತೀಯ ರೈಲ್ವೆಯನ್ನು ಬಾಧಿಸಿರುವ ಬೃಹತ್ ಲೋಪಗಳ ನೇರ ಹೊಣೆಗಾರಿಕೆಯನ್ನು ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವರ್ಧಿತ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಮತ್ತು ಅಪಘಾತಗಳನ್ನು ತಡೆಯಲು ಭಾರತದಾದ್ಯಂತ ಎಲ್ಲ ಮಾರ್ಗಗಳಲ್ಲಿ ‘ಕವಚ್’ ವ್ಯವಸ್ಥೆಯನ್ನು ಅಳವಡಿಸಬೇಕು ಎಂಬುದು ತಮ್ಮ ಪಕ್ಷದ ಬೇಡಿಕೆಯಾಗಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X