ವದಂತಿಗಳಿಗೆ ತೆರೆ: 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ

Date:

Advertisements

ಕಳೆದ ಕೆಲವು ತಿಂಗಳುಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ, 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.  ನತಾಶಾ ಸ್ಟಾಂಕೋವಿಕ್ ಹಾಗೂ ಹಾರ್ದಿಕ್ ಪಾಂಡ್ಯಾ ದಂಪತಿ ಬೇರ್ಪಟ್ಟಿದ್ದಾರೆ.

ಈ ಬಗ್ಗೆ ಜುಲೈ 18ರಂದು ತಮ್ಮ ಇನ್ಸ್‌ಟಾಗ್ರಾಂ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಹೀರೋ, “4 ವರ್ಷಗಳ ಕಾಲ ಒಟ್ಟಿಗೆ ಇದ್ದ ನಂತರ, ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಒಟ್ಟಿಗೆ ಇರಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಆದರೆ ಅದು ಕೈಗೂಡಿಲ್ಲ. ಇದು ನಮ್ಮಿಬ್ಬರಿಗೂ ಉತ್ತಮವಾದ ನಿರ್ಧಾರವೆಂದು ಭಾವಿಸುತ್ತೇವೆ. ಇದು ನಮ್ಮ ನಡುವಿನ ಕಠಿಣ ನಿರ್ಧಾರವಾಗಿತ್ತು” ಎಂದು ತಿಳಿಸಿದ್ದಾರೆ.

“ನಮ್ಮ ದಾಂಪತ್ಯ ಜೀವನದಲ್ಲಿ ಮಗ ಅಗಸ್ತ್ಯ ಹುಟ್ಟಿದ್ದಾನೆ. ಆತ ನಮ್ಮಿಬ್ಬರ ಜೀವನದ ಕೇಂದ್ರ ಬಿಂದುವಾಗಿಯೇ ಮುಂದುವರಿಯಲಿದ್ದಾನೆ. ಆತನ ಸಂತೋಷಕ್ಕಾಗಿ ನಾವು ಅವನಿಗೆ ಸಾಧ್ಯವಿರುವ ಎಲ್ಲವನ್ನೂ ನೀಡುವುದನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ನಾವಿಬ್ಬರೂ ಕೂಡ ಸಹ-ಪೋಷಕರಾಗಿ ಮುಂದುವರಿಯಲಿದ್ದೇವೆ” ಎಂದು ಹಾರ್ದಿಕ್ ಪಾಂಡ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisements

ನಮ್ಮ ಈ ಕಷ್ಟಕರ ಮತ್ತು ಸೂಕ್ಷ್ಮ ನಿರ್ಧಾರದ ಸಂದರ್ಭದಲ್ಲಿ ನಮ್ಮ ಖಾಸಗಿತನ ಹಾಗೂ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನಾವಿಬ್ಬರೂ ಪ್ರಾಮಾಣಿಕವಾಗಿ ವಿನಂತಿಸುವುದಾಗಿ ತಿಳಿಸುವ ಮೂಲಕ ನತಾಶಾ ಸ್ಟಾಂಕೋವಿಕ್ ಹಾಗೂ ಹಾರ್ದಿಕ್ ಪಾಂಡ್ಯ ದಂಪತಿ 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.

ವಿದೇಶಕ್ಕೆ ಹಾರಿರುವ ನತಾಶಾ

ಈ ನಡುವೆ ಈಗ ನತಾಶಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಹಾರ್ದಿಕ್ ಪಾಂಡ್ಯ ಮನೆ ತೊರೆದಿದ್ದಾರೆ. ತಮ್ಮ ಮಗ ಅಗಸ್ತ್ಯಾ ಜೊತೆಗೆ ವಿದೇಶಕ್ಕೆ ತೆರಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X