ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ; 32 ಸಾವು

Date:

Advertisements

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಢಾಕಾ ಸೇರಿ ದೇಶದ ವಿವಿಧೆಡೆ ಸಂಭವಿಸಿದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.

Advertisements

ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರ ಜತೆ ಘರ್ಷಣೆಗಿಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಪ್ರತಿಭಟನಕಾರರು ಬಾಂಗ್ಲಾದೇಶದ ಸರ್ಕಾರಿ ವಾಹಿನಿ ಬಿಟಿವಿಯ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು.

ಢಾಕಾ ವಿಶ್ವವಿದ್ಯಾಲಯದ ಆವರಣ ಸೇರಿದಂತೆ ವಿವಿಧೆಡೆ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ರಬ್ಬರ್‌ ಬುಲೆಟ್‌ಗಳು, ಅಶ್ರುವಾಯುಗಳನ್ನೂ ಸಿಡಿಸಿದರು. ಇದರ ಪರಿಣಾಮ ಹಲವರು ಗಾಯಗೊಂಡರು.

ಪ್ರತಿಭಟನೆ ಪರಿಣಾಮ ಪ್ರಮುಖ ನಗರಗಳಲ್ಲಿನ ಶಾಪಿಂಗ್‌ ಮಾಲ್‌ಗಳು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಢಾಕಾದಲ್ಲಿನ ಅಮೆರಿಕ ರಾಯಭಾರಿ ಕಚೇರಿ ಸೇರಿದಂತೆ ವಿವಿಧ ದೇಶಗಳ ರಾಯಭಾರಿ ಕಚೇರಿಗಳು ಮುಚ್ಚಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X