ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

Date:

Advertisements

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಪಕ್ಷಗಳು ಚುನಾವಣಾ ತಯಾರಿ ಅರಂಭಿಸಿವೆ. ಇದೀಗ, ಎಎಪಿ ಕೂಡ ಚುನಾವಣಾ ಅಖಾಡಕ್ಕೆ ಇಳಿದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಹರಿಯಾಣಕ್ಕೆ ಐದು ಗ್ಯಾರಂಟಿಗಳನ್ನು ಘೋಷಿದ್ದಾರೆ. ಬಂಧನದಲ್ಲಿರುವ ಕೇಜ್ರಿವಾಲ್ ಬದಲಾಗಿ ಸುನೀತಾ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಎಎಪಿ ಸಂಸದರಾದ ಸಂಜಯ್ ಸಿಂಗ್ ಮತ್ತು ಸಂದೀಪ್ ಪಾಠಕ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಸುನೀತಾ ಕೇಜ್ರಿವಾಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಎಎಪಿ ಅಧಿಕಾರಿಕ್ಕೆ ಬಂದರೆ, ಪಂಜಾಬ್ ಮತ್ತು ದೆಹಲಿಯಂತೆ ಹಗಲಿರುಳು ಉಚಿತ ವಿದ್ಯುತ್, ಪ್ರತಿಯೊಬ್ಬ ಯುವಕನಿಗೆ ಉದ್ಯೋಗ, ಪ್ರತಿ ಮಗುವಿಗೆ ಶಿಕ್ಷಣ, ಉಚಿತ ವೈದ್ಯಕೀಯ ಚಿಕಿತ್ಸೆ ಹಾಗೂ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ಮಾಸಿಕ 1,000 ರೂ. ಸಹಾಯ ಧನ ನೀಡುವುದಾಗಿ ಘೋಷಿಸಿದ್ದಾರೆ.

ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ ಮಾತನಾಡಿ, “ಪಕ್ಷವು ಎಲ್ಲ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಚುನಾವಣೆಯಲ್ಲಿ ಪ್ರಬಲವಾಗಿ ಹೋರಾಡಲು ಮತ್ತು ಸರ್ಕಾರ ರಚಿಸಲು ಸಜ್ಜಾಗಿದೆ” ಎಂದು ಹೇಳಿದ್ದಾರೆ.

Advertisements

“ಜನರು ಬದಲಾವಣೆ ಬಯಸಿದ್ದಾರೆ. ಹರಿಯಾಣದಲ್ಲಿ ಸಂಪೂರ್ಣ ಬಲದೊಂದಿಗೆ ಚುನಾವಣೆ ಎದುರಿಸಲು ಎಎಪಿ ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಕಾರ್ಯದರ್ಶಿ ಸಂದೀಪ್ ಪಾಠಕ್ ಮಾತನಾಡಿ, “ನಾವು ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಪೂರ್ಣ ಶಕ್ತಿಯಿಂದ ಚುನಾವಣೆ ಎದುರಿಸಿದಂತೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಬಲವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಬಿಜೆಪಿ ಸರ್ಕಾರವು ತೂಗುಗತ್ತಿಯ ಮೇಲಿದೆ. ರೈತ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಳಿ, ದೌರ್ಜನ್ಯ ನಡೆಸಿದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ, ಅಧಿಕಾರಕ್ಕೇರಬೇಕೆಂದು ಕಾಂಗ್ರೆಸ್‌ ಭಾರೀ ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಒಕ್ಕೂಟದಲ್ಲಿರುವ ಎಎಪಿ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿತ್ತು. ಅದರೆ, ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ ಎಂದು ಎಎಪಿ ಹೇಳುತ್ತಿದೆ. ಹೀಗಾಗಿ, ಕಾಂಗ್ರೆಸ್‌-ಎಎಪಿ ಮೈತ್ರಿ ವಿಧಾನಸಭೆಯಲ್ಲಿ ಮುಂದುವರೆಯುವುದೇ ಅಥವಾ ಮುರಿಯುವುದೇ ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X