ಕೊಪ್ಪಳ | ಬೆಳೆವಿಮೆಗೆ ಕನ್ನ ಹಾಕಿದ ಪಿಡಿಒ; ರೈತರ ಆಕ್ರೋಶ

Date:

Advertisements
  • ಶಿರೂರು ಪಂಚಾಯತಿಯಲ್ಲಿ ಬೆಳೆವಿಮೆಗೆ ಕನ್ನ
  • ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ರೈತರು

‘ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ’ಯಲ್ಲಿ ರೈತರಿಗೆ ಬಿಡುಗಡೆಯಾಗಿದ್ದ ಹಣವನ್ನು ಶಿರೂರು ಪಂಚಾಯತಿ ಪಿಡಿಒ ಮತ್ತು ವಿಮಾ ಕಂಪನಿ ಸೇರಿ ಲಪಟಾಯಿಸಿದ್ದಾರೆ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ರೈತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಶಿರೂರು ಪಂಚಾಯತಿಯ ಪಿಡಿಓ ಶರಣಪ್ಪ ವಿರುದ್ಧ ಆರೋಪ ಕೇಳಿಬಂದಿದ್ದು, “ಶರಣಪ್ಪ ಅವರು ಬೆಳೆ ವಿಮಾ ಕಂಪನಿಯವರಿಗೆ ಕೋಟ್ಯಂತರ ರೂಪಾಯಿ ಲಾಭ ಮಾಡಿಕೊಡಲು ರೈತರು ಬೆಳೆದ ಬೆಳೆಯಲ್ಲಿ 80% ಇಳುವರಿ ಬಂದಿದೆ ಎಂದು ವಿಮಾ ಕಂಪನಿಯವರಿಗೆ ಬರೆದುಕೊಟ್ಟು ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಪಿಡಿಒ ನಿರ್ಧಾರ ಖಂಡಿಸಿ ರೈತರ ಹಕ್ಕು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಅಂದಪ್ಪ ಕೋಳೂರ ಹಾಗೂ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಹೂಗಾರ ನೇತೃತ್ವದಲ್ಲಿ ಖಂಡಿಸಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisements

ಮಹೇಶಪ್ಪ ಹಡಪದ ಮಾತನಾಡಿ, “ಕುಕನೂರು ತಾಲೂಕಿನ ಯರೇಹಂಚಿನಾಳ, ಬಿನ್ನಾಳ, ಸಿದ್ನಕೊಪ್ಪ, ಸೋಂಪೂರ, ಮಂಡಲಗೇರಿ, ರಾಜೂರು ಪಂಚಾಯಿತಿ ಸೇರಿದಂತೆ ಶೀರೂರ ಗ್ರಾಮ ಪಂಚಯತಿ ವ್ಯಾಪ್ತಿಗೆ ಬರುವ ಅನೇಕ ಗ್ರಾಮದ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಖಾಸಗಿ ಕಂಪನಿಯವರು ರೈತರಿಗೆ ಮೊಸ ಮಾಡುತ್ತಾ ಬಂದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

“ಶಿರೂರು ಪಂಚಾಯತಿ ವ್ಯಾಪ್ತಿಗೆ ಬರುವ ರೈತರಿಗೆ 2023ನೇ ಸಾಲಿನ ಬೆಳೆವಿಮೆ ಬರದಿದ್ದರೆ, ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡುವದಾಗಿ ಹಾಗೂ ಹೊಸ ಸರ್ಕಾರ ರಚನೆ ಆದ ನಂತರ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂದೆ ಉಗ್ರ ಹೋರಾಟವನ್ನು ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಮುಖಂಡ ನೀಲಪ್ಪ ಬೆದವಟ್ಟಿ, ಮಲ್ಲಿಕಾರ್ಜುನಯ್ಯ ಗುತ್ತುರ, ಶರಣಬಸಪ್ಪ ಚಪ್ಪರದ, ಶಿದ್ದಪ್ಪ ಪೊಲೀಸ್ ಪಾಟೀಲ್, ಹನುಮಪ್ಪ ಗುರಿಕಾರ, ಪರಸಪ್ಪ ಸಂಗನಾಳ, ಶೇಕಣ್ಣ ಮಾದಿನೂರ, ಮಾರುತಿ ಕಲಬುರ್ಗಿ, ಅಶೋಕ ಕಲಬುರ್ಗಿ, ಪರಶುರಾಮ್, ದೇವಪ್ಪ, ಸಿದ್ದಲಿಂಗಪ್ಪ, ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X