ಬಾಗೇಪಲ್ಲಿ | ಮಸಣ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವಂತೆ ರಾಜ್ಯ ಮಸಣ ಕಾರ್ಮಿಕರ ಸಂಘ ಆಗ್ರಹ

Date:

Advertisements

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ  ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಪದಾಧಿಕಾರಿಗಳು, “ಮಸಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗ ಭದ್ರತೆ, ನಿಗದಿತ ವೇತನವೂ ಇಲ್ಲದೆ ಮಸಣ ಕಾರ್ಮಿಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಮಸಣ ಕಾರ್ಮಿಕರನ್ನು ಸರಕಾರ ನಿರ್ಲಕ್ಷಿಸುತ್ತಿದೆ” ಎಂದು ದೂರಿದರು.

ಮಸಣ 2

“ಹೆಣಗಳನ್ನು ಹೂಳುವ ಕೆಲಸದಲ್ಲಿ ತೊಡಗಿರುವ ನಾವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇವೆ. ಆದ್ದರಿಂದ ಸರಕಾರ ಮಸಣ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಪ್ರತಿ ಮಸಣಕ್ಕೆ ಒಬ್ಬ ಮಸಣ ನಿರ್ವಾಹಕರನ್ನು ನೇಮಿಸಬೇಕು. ಸ್ಥಳೀಯ ಸಂಸ್ಥೆಗಳ ಮೂಲಕ ಕಾರ್ಮಿಕರಿಗೆ ಅಗತ್ಯವಿರುವ ಗುದ್ದಲಿ, ಪಿಕ್ಕಾಶಿ, ಸಲಾಕೆ ಇತ್ಯಾದಿ ಸಲಕರಣೆಗಳನ್ನು ವಿತರಿಸುವ ಕೆಲಸಕ್ಕೆ ಮುಂದಾಗಬೇಕು. ಮಸಣ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು, ಸೇವೆಯನ್ನು ಪರಿಗಣಿಸಿ ನಿವೇಶನಗಳನ್ನು ಹಂಚಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

ಮಸಣ ಕಾರ್ಮಿಕರ ಸಂಘ ಮತ್ತು ತಮಟೆ ಕಲಾವಿದರ ಸಂಘದ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ ಮಾತನಾಡಿ, “ಮಸಣ ಕಾರ್ಮಿಕರ ಕೆಲಸವನ್ನು ಉದ್ಯೋಗ ಖಾತರಿ ಯೋಜನೆಯಡಿ ಪರಿಗಣಿಸಿ, ಗುಂಡಿ ತೋಡುವ ಕೆಲಸಕ್ಕೆ ಕನಿಷ್ಠ ವೇತನ ನಿಗದಿಪಡಿಸಬೇಕು. ತಮಟೆ ಕಲಾವಿದರು ಸಹ ಸಂಕಷ್ಟದಲ್ಲಿದ್ದು, ಅವರಿಗೂ ಸ್ಥಳೀಯ ಆಡಳಿತ ವತಿಯಿಂದ ತಮಟೆ ವಿತರಣೆ ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಬಾಗೇಪಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಧರಣಿಯಲ್ಲಿ ದಲಿತ ಹಕ್ಕುಗಳ ಜಿಲ್ಲಾ ಅಧ್ಯಕ್ಷ ಕೆ.ನಾಗರಾಜು, ತಾಲೂಕು ಅಧ್ಯಕ್ಷ ಜಿ.ಕೃಷ್ಣಪ್ಪ ಚಂಚರಾನಪಲ್ಲಿ, ನಗರ ಸಂಚಾಲಕ ಅಶ್ವತ್ಥನಾರಾಯಣ, ದಲಿತ ಮುಖಂಡರಾದ ಚನ್ನರಾಯಪ್ಪ ಹಾಗೂ ಸಿಐಟಿಯು ತಾಲೂಕು ಕಾರ್ಯದರ್ಶಿ ಮುಸ್ತಫಾ, ನಾರಾಯಣ ಸ್ವಾಮಿ, ರಾಮಾಂಜಿ ಮತ್ತು ಮಸಣ ಕಾರ್ಮಿಕರ ಮುಖಂಡರಾದ ಆದಿ ನಾರಾಯಣಪ್ಪ, ಕೃಷ್ಣಪ್ಪ, ಅಶ್ವತ್ಥಪ್ಪ, ಮೂರ್ತಿ, ನರಸಿಂಹಪ್ಪ, ವೆಂಕಟರಮಣ, ಸುಬ್ಬರಾಯಪ್ಪ ಸೇರಿದಂತೆ ಇತರೆ ಮಸಣ ಕಾರ್ಮಿಕರು ಹಾಗೂ ತಮಟೆ ಕಲಾವಿದರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X