2 ವರ್ಷದಿಂದ ನಡೆಯುತ್ತಿದೆ ಚನ್ನರಾಯಪಟ್ಟಣ ರೈತ ಹೋರಾಟ; ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಹೋರಾಟ ಬರೋಬ್ಬರಿ 845 ದಿನಗಳನ್ನು (ಸುಮಾರು 2 ವರ್ಷ) ಪೂರೈಸಿದೆ. ಈ ನಡುವೆ, ಎರಡು ಸರ್ಕಾರಗಳು ಬದಲಾಗಿವೆ. ಅದರೂ, ರೈತರ ಬೇಡಿಕೆಗಳಿಗೆ ಯಾವುದೇ ಸರ್ಕಾರ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸುತ್ತಿರುವ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಧರಣಿನಿರತ ರೈತರು ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ ಹಮ್ಮಿಕೊಂಡಿದ್ದಾರೆ.

ಚನ್ನರಾಯಪಟ್ಟಣ ಸುತ್ತಲಿನ 13 ಗ್ರಾಮಗಳ 1,777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಬಲವಂತವಾಗಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ. ಕೆಐಎಡಿಬಿ ಕ್ರಮವನ್ನು ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ರೈತ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಂತ್ರಿಗಳು-ಶಾಸಕರು ರೈತರಿಗೆ ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

“ಹೋರಾಟದ ಕೊನೆಯ ಪ್ರಯತ್ನವಾಗಿ ಜುಲೈ 23ರಂದು ಮುಂತ್ರಿಮಂತ್ರಿ ಮನೆಗೆ ಜಾಥಾ ಹೊರಟಿದ್ದೇವೆ. ನಮ್ಮ ಸಮಸ್ಯೆಗೆ ಪರಿಹಾರ ಸಿಗುವವರೆಗೂ ನಾವು ಹಿಂದಿರುಗುವುದಿಲ್ಲ. ರೈತ ಹೋರಾ ಸಮಿತಿಯ ನಿಯೋಗುವು ಕೈಗಾರಿಕಾ ಮಂತ್ರಿ ಎಂ.ಬಿ ಪಾಟೀಲರನ್ನು ಭೇಟಿ ಮಾಡಿದಾಗ, ‘ನೀವು ಹೇಳಿದಹಾಗೆಲ್ಲ ಕೇಳೋಕಾಗಲ್ರೀ…!’ ಎಂದು ಉದ್ಧಟತನದ ಮಾತಾಡಿದ್ದಾರೆ. ರೈತರನ್ನು ಅಪಮಾನಿಸಿದ್ದಾರೆ. ಅವರನ್ನು ಮಂತ್ರಿ ಮಂಡಲದಿಂದ ವಾಜಾ ಮಾಡಬೇಕು” ಎಂದು ರೈತರು ಒತ್ತಾಯಿಸಿದ್ದಾರೆ.

Advertisements

“ಈಗಾಗಲೇ ಹಲವಾರು ಕಾರಣಗಳಿಗಾಗಿ ಚನ್ನರಾಯಪಟ್ಟಣ ಹೋಬಳಿಯ ಸಾವಿರಾರು ಎಕರೆ ಭೂಮಿಯನ್ನು ಕೆಐಎಡಿಬಿ ವಶಪಡಿಸಿಕೊಂಡಿದೆ. ಇದೀಗ, ಕೈಗಾರಿಕೆಗಾಗಿ ಚನ್ನರಾಯಪಟ್ಟಣ ಮತ್ತು ಕುಂದಾಣದ ಸುತ್ತಲಿನ ಹಳ್ಳಿಗಳು 2,030 ಎಕರೆ ಭೂಮಿಯನ್ನು ಐಎಡಿಬಿ ಮೊದಲನೇ ಹಂತದಲ್ಲಿ ಸ್ವಾಧೀನಪಡಿಸಿಕೊಂಡಿದೆ. ಈಗ ಮತ್ತೆ ಚನ್ನರಾಯಪಟ್ಣ ಹೋಬಳಿಯಲ್ಲಿ 1,777 ಎಕರೆ ಭೂಮಿಯನ್ನು ವಶಪಡಿಸಕೊಳ್ಳಲು ಮುಂದಾಗಿದೆ. ಆದರೆ, 80%ಗೂ ಅಧಿಕ ರೈತರು ಭೂಮಿಯನ್ನು ಕೊಡಲು ನಿರಾಕರಿಸಿದ್ದಾರೆ. ಕೆಐಎಡಿಬಿ ತನ್ನ ಕ್ರಮವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ʼಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿʼ ರಚಿಸಿಕೊಂಡು ಹೋರಾಟ ನಡೆಸುತ್ತಿದ್ದೇವೆ. ಹಿಂದೆ ವಿಪಕ್ಷ ನಾಯಕರಾಗಿದ್ದ ಸಿದ್ಧರಾಮಯ್ಯಮ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ನಮ್ಮ ಜಮೀನು ಸ್ವಾಧೀನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಈಗ ಉಲ್ಟಾ ಹೊಡೆಯುತ್ತಿದ್ದಾರೆ” ಎಂದು ಹೋರಾಟನಿರತ ರೈತರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X