ಜೈಲಿನಲ್ಲಿಯೇ ಹತ್ಯೆಗೆ ಸಂಚು, ಕೇಜ್ರಿವಾಲ್ ಆರೋಗ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ: ಎಎಪಿ ಆರೋಪ

Date:

Advertisements

ಅಬಕಾರಿ ನೀತಿ ಹಗರಣದ ಆರೋಪದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದೊಂದಿಗೆ ಬಿಜೆಪಿ ಆಟವಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “ಅರವಿಂದ್ ಕೇಜ್ರಿವಾಲ್ ಅವರ ವೈದ್ಯಕೀಯ ವರದಿಯು ಅವರಿಗೆ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳುತ್ತದೆ. ಆದರೆ ಬಿಜೆಪಿಯವರು ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಚೆಲ್ಲಾಟವಾಡುತ್ತಿದ್ದಾರೆ. ಕೇಜ್ರಿವಾಲ್ ಹತ್ಯೆಗೆ ಸಂಚು ನಡೆಯುತ್ತಿದೆ” ಎಂದು ದೂರಿದರು.

“ಆರಂಭದಲ್ಲಿ ಕೇಜ್ರಿವಾಲ್ ಅವರು ಸಿಹಿ ತಿಂದು ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿಗರು ಹೇಳುತ್ತಿದ್ದರು. ಆದರೆ ಈಗ ಕೇಜ್ರಿವಾಲ್ ತನ್ನ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಯಾರಾದರೂ ತಮ್ಮ ಸ್ವಂತ ಜೀವಕ್ಕೆ ಯಾಕೆ ಆಪತ್ತು ತರುತ್ತಾರೆ” ಎಂದು ಪ್ರಶ್ನಿಸಿದರು.

Advertisements

ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, “ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ. ಅವರಿಗೆ ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ವಿಕೆ ಸಕ್ಸೇನಾ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್‌ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಕ್ಸೇನಾ ಅವರು ಕೇಜ್ರಿವಾಲ್ ಅವರ ಆರೋಗ್ಯದ ಕುರಿತು ಉಲ್ಲೇಖ ಮಾಡಿದ್ದಾರೆ. “ಮುಖ್ಯಮಂತ್ರಿ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರ ಸಾಕಷ್ಟು ಲಭ್ಯವಿದ್ದರೂ ಕೂಡಾ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೊರಿಗಳನ್ನು ಸೇವಿಸಿದ್ದಾರೆ” ಎಂದು ದೂರಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X