ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

Date:

Advertisements

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್‌) ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಡಿಎಸ್‌ಎಸ್‌ ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಮಾತನಾಡಿ, “ಚಡಚಣ ತಾಲೂಕಿನ ಮರಗೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಶೌಚಾಲಯಗಳಿಗೆ ಬಾಗಿಲುಗಳಿಲ್ಲ. ಕಿಟಕಿಗಳು ಕಿತ್ತುಹೋಗಿವೆ. ಮಕ್ಕಳ ಊಟಕ್ಕೂ ಅವ್ಯವಸ್ಥೆ ಉಂಟಾಗಿದ್ದು, ಶಾಲೆಯಲ್ಲಿ ಕಲಿಕಾ ವಾತಾವರಣವೇ ಹಾಳಾಗಿ ಹೋಗಿದೆ” ಎಂದರು.

“ವಸತಿಶಾಲೆಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದರೆ ಯಾವೊಬ್ಬ ಅಧಿಕಾರಿ ಅಥವಾ ಶಾಲಾ ಸಿಬ್ಬಂದಿ ಈ ಕುರಿತಾಗಿ ತಲೆ ಕೆಡಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಸಮಸ್ಯೆಯಾಗುತ್ತಿದ್ದರೂ ಅಧಿಕಾರಿಗಳು ನೋಡಿಯೂ ನೋಡದಂತೆ ಕಣ್ಣು ಮುಚ್ಚಿಕೊಂಡು ಹೋಗುತ್ತಿದ್ದಾರೆ. ಅಂಥವರ ವಿರುದ್ಧ ಕೂಡಲೇ ಕ್ರಮ ಜರುಗಿಸಿ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

Advertisements

ಸಂಚಾಲಕ ಮುರಗೇಶ ಜೈನಾಪೂರ ಮಾತನಾಡಿ, “ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಿರುವುದರಿಂದ ಅಲ್ಲಿರುವ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅತಿ ಅವಶ್ಯಕವಾಗಿದೆ. ಕಾಟಚಾರಕ್ಕೆ ಅಧಿಕಾರಿಗಳು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆಯೇ ಹೊರತು ಅವರಿಗೆ ಯಾವುದೇ ಜವಾಬ್ದಾರಿಯಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡೆಂಘೀಯಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದಲ್ಲಿ ಏರುಪೇರಾದರೆ ಯಾರು ಹೊಣೆ. ಸಧ್ಯ ಅಲ್ಲಿರುವ ವಿದ್ಯಾರ್ಥಿಗಳಿಗೆ ಡೆಂಘೀ ಹರಡಿದರೆ, ಯಾರು ಜವಾಬ್ದಾರಿ, ವಿದ್ಯಾರ್ಥಿಗಳು ಭಯದಿಂದ ಶಿಕ್ಷಣ ಪಡೆದುಕೊಳ್ಳುವಂತೆ ಮಾಡಿರುವ ಅಧಿಕಾರಿಗಳ ವಿರುದ್ಧ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಅಲ್ಲಿನ ಸಮಸ್ಯೆಗೆ ಹೊಣೆಗಾರರನ್ನಾಗಿಸಬೇಕು. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಮೊರಾರ್ಜಿ ದೇಸಾಯಿ ವಸತಿಶಾಲೆಗೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಕಾರಣರಾಗುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಈ ಸಂದರ್ಭದಲ್ಲಿ ಶ್ರೀಧರ ವಾತ್ತೊರೆ, ಯಲ್ಲಪ್ಪ ಕಾಂಬಳೆ, ಚೈತನ್ಯ ತೊರವಿ, ಸವಿತಾ ವಗ್ಗರ, ನಕುಶ ಹೊಸಮನಿ, ಸಂಗಪ್ಪ ಶೇಖರ ಮಲಕನವರ, ಸಂಗಮೇಶ ಇರಸೂರ, ಫೀಮು ಉತ್ನಾಳ, ಮಾಂತೇಶ ರಾಠೋಡ, ಶ್ರೀಮಂತ ಪವಾರ, ಸದಾಶಿವ ಕಾಂಬಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

Download Eedina App Android / iOS

X