ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

Date:

Advertisements

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ ಮತ್ತು ಸನ್‌ ಗ್ಲಾಸ್‌ ಧರಿಸಿ, ಇನ್‌ಸ್ಟಾಗ್ರಾಂನಲ್ಲಿ ಫೋಟೋ ಅಪ್‌ಲೋಡ್‌ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಸಯೆಬಾಪುರ ಗ್ರಾಮದಲ್ಲಿ ಜುಲೈ 17ರಂದು ಘಟನೆ ನಡೆದಿದೆ. ಹಲ್ಲೆಗೊಳಗಾದ ದಲಿತ ಯುವಕ ಅಜಯ್ ಪರ್ಮಾರ್ ಅವರು ಹಿಮಂತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಪ್ರಬಲ ಜಾತಿಯ ಕ್ಷತ್ರಿಯರೆಂದು ಪರಿಗಣಿಸುವ ದರ್ಬಾರ್ ಸಮುದಾಯಕ್ಕೆ ಸೇರಿದ ನಾಲ್ವರು ತನ್ನನ್ನ ಥಳಿಸಿದ್ದಾರೆ. ಆರೋಪಿಗಳನ್ನು ನನ್ನನ್ನು ನವನಗರ ಬಸ್ ನಿಲ್ದಾಣದ ಬಳಿ, ಸುತ್ತುವರೆದು ದಾಳಿ ನಡೆಸಿದ್ದಾರೆ. ‘ದರ್ಬಾರ್ ಸಮುದಾಯದ ಜನರು ಮಾತ್ರ ಸಫಾ ಮತ್ತು ಸನ್‌ ಗ್ಲಾಸ್‌ ಧರಿಸಬೇಕು. ಬೇರೆ ಯಾರೂ ಅವುಗಳನ್ನು ಧರಿಸಬಾರದು’ ಎಂದು ಆರೋಪಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಪರ್ಮಾರ್ ಆರೋಪಿಸಿದ್ದಾರೆ.

Advertisements

ಎಫ್‌ಐಆರ್‌ನಲ್ಲಿ ನಾಲ್ವರು ಆರೋಪಿಗಳನ್ನು ಹೆಸರಿಸಲಾಗಿದೆ – ಕಿರ್ಪಾಲ್‌ಸಿನ್ಹ್ ರಾಥೋಡ್, ಮನುಸಿನ್ ರಾಥೋಡ್ ಮತ್ತು ಅವರ ಪುತ್ರರಾದ ಹಿತೇಂದ್ರಸಿನ್ಹ್ ರಾಥೋಡ್ ಮತ್ತು ಶುಕಲ್‌ಸಿನ್ಹ್ ರಾಥೋಡ್ ಹಲ್ಲೆಗೈದಿರುವ ಆರೋಪಿಗಳು.

ಗುಜರಾತ್‌ನಲ್ಲಿ ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ದಲಿತನೊಬ್ಬನನ್ನು ಥಳಿಸಿರುವುದು ಇದೇ ಮೊದಲಲ್ಲ. 2023ರ ಜೂನ್‌ನಲ್ಲಿ, ಪಾಲಂಪುರದ ಮೋಟಾ ಗ್ರಾಮದಲ್ಲಿ 21 ವರ್ಷ ವಯಸ್ಸಿನ ದಲಿತ ಯುವಕ ಮತ್ತು ಆತನ ಕುಟುಂಬದ ಮೇಲೆ ಪ್ರಬಲ ಜಾತಿ ರಜಪೂತ ಸಮುದಾಯದ ಗುಂಪೊಂದು ಸನ್‌ ಗ್ಲಾಸ್‌ ಮತ್ತು ಒಳ್ಳೆಯ ಬಟ್ಟೆ ಧರಿಸಿದ್ದಕ್ಕಾಗಿ ಹಲ್ಲೆ ಮಾಡಿತ್ತು.

2023ರ ನವೆಂಬರ್‌ನಲ್ಲಿ 21 ವರ್ಷದ ದಲಿತ ಯುವಕ ತನ್ನ ಉದ್ಯೋಗದಾತನ ಬಳಿ ತನ್ನ ಸಂಬಳ ಕೇಳಿದ್ದಕ್ಕಾಗಿ ಹಲ್ಲೆ ನಡೆಸಲಾಗಿತ್ತು. ಈ ವರ್ಷದ ಫೆಬ್ರವರಿಯಲ್ಲಿ, ಗಾಂಧಿನಗರ ಜಿಲ್ಲೆಯಲ್ಲಿ ವಧುವಿನ ಮನೆಗೆ ಕುದುರೆ ಮೇಲೆ ಸವಾರಿ ಮೂಲಕ ತೆರಳಿದ್ದಕ್ಕೆ, ದಲಿತ ವರನ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X