ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

Date:

Advertisements

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಲೀದ್‌ ಜಾಮೀನು ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್‌ ವರ್ಮಾ ಹಿಂದೆ ಸರಿದಿದ್ದಾರೆ.

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಉಮರ್‌ ಖಲೀದ್ ಜಾಮೀನು ಅರ್ಜಿಯನ್ನು ಜುಲೈ 24ರಂದು ಬೇರೊಂದು ಪೀಠ ವಿಚಾರಣೆ ನಡೆಸಲಿದೆ. ಉಮರ್‌ ಅವರ ಜಾಮೀನು ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್‌ ಹಾಗೂ ಅಮಿತ್‌ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಬೇಕಿತ್ತು.

ಖಾಲಿದ್ ಅವರನ್ನು ಸೆಪ್ಟೆಂಬರ್ 2020 ರಲ್ಲಿ ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಯಿತು.

Advertisements

ಅಂದಿನಿಂದ ಜೈಲಿನಲ್ಲಿರುವ ಅವರು ಸಲ್ಲಿಸಿರುವ ಎರಡನೇ ಸುತ್ತಿನ ಜಾಮೀನು ಅರ್ಜಿ ಇದಾಗಿದೆ. ಖಾಲಿದ್‌ಗೆ ಎರಡು ಬಾರಿ ವಿಚಾರಣಾ ನ್ಯಾಯಾಲಯ ಮತ್ತು ಒಂದು ಬಾರಿ ಹೈಕೋರ್ಟ್ ಜಾಮೀನು ನಿರಾಕರಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ವಿಚಾರಣಾ ನ್ಯಾಯಾಲಯವು ಮೊದಲು ಮಾರ್ಚ್ 2022ರಲ್ಲಿ ಅವರಿಗೆ ಜಾಮೀನು ನಿರಾಕರಿಸಿತು. ನಂತರ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಆದರೆ ಹೈಕೋರ್ಟ್ ಅಕ್ಟೋಬರ್ 2022ರಲ್ಲಿ ಜಾಮೀನು ನಿರಾಕರಿಸಿದ ನಂತರ ಖಲೀದ್‌ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋದರು.

ಮೇ 2023 ರಲ್ಲಿ, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿತು. ನಂತರ ಖಾಲಿದ್‌ ಅವರ ಮನವಿಯನ್ನು 14 ಬಾರಿ ಮುಂದೂಡಲಾಯಿತು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ  ಮತ್ತು  ಪಂಕಜ್ ಮಿತ್ತಲ್‌ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ  ಫೆಬ್ರವರಿ 14 ರಂದು  ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಆದರೆ ಖಾಲಿದ್ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X