ಧಾರವಾಡ | ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಹೋರಾಟ‌ ಮಾಡಲಿ: ಶಾಸಕ ಕೋನರೆಡ್ಡಿ

Date:

Advertisements

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು ವಾರ ಬರೀ ವಾಲ್ಮಿಕಿ ಹಗರಣ ವಿವಾರವಾಗಿ ಬರಿ ಗದ್ದಲ ಮಾಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿಯವರು ಹೋರಾಟ ಮಾಡಲಿ ಎಂದು ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ ತಿಳಿಸಿದರು.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, “ನಿರಂತರ ಹೋರಾಟದ ಕಿಚ್ಚನ್ನು ಹೊತ್ತಿಸಿದ ನಮ್ಮ ನಾಡಿನಲ್ಲಿ, ಕೇಂದ್ರ ಸರ್ಕಾರವು ಮಹದಾಯಿ ಯೋಜನೆ ಜಾರಿಮಾಡಲು ಕುಂಟು ನೆಪ ಹೇಳುತ್ತಿದೆ. ವನ್ಯಜೀವಿ ಮಂಡಳಿಯ ನೆಪ ಹೇಳುತ್ತ ಮಹದಾಯಿ ಯೋಜನೆಗೆ ಮೀನಮೇಷ ಮಾಡುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಈ ಹಿಂದೆ ದಿ‌ವಂಗತ ಅನಂತಕುಮಾರ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ ಒತ್ತಡ ಹಾಕುತ್ತಿದ್ದರು. ಈಗ ಆ ಜವಾಬ್ದಾರಿ ಪ್ರಹ್ಲಾದ ಜೋಶಿ ತೆಗೆದುಕೊಂಡು ಮಹದಾಯಿಗೆ ಕ್ಲಿಯರೆನ್ಸ್ ಕೊಡಿಸುವ ಕಾರ್ಯ ಮಾಡಬೇಕಿದೆ. ಕೇಂದ್ರ ಸರಕಾರ ಯೋಜನೆ ಜಾರಿ ಮಾಡಬೇಕು ಅಂತ ಮನಸ್ಸು ಮಾಡಿದ್ರೆ ಒಂದು ತಿಂಗಳಲ್ಲಿ ಕೆಲಸ ಮುಗಿಯುತ್ತದೆ. ಹಾಗೇಯೆ ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. ಈಗಲಾದರೂ ಯೋಜನೆ ಜಾರಿಮಾಡುವ ಕಾರ್ಯಕ್ಕೆ ಮುಂದಾಗಬೇಕೆಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಮಳೆ ಬಹಳ ಆಗ್ತಾ ಇದೆ, ನಮಗೆ ಏನು ಪರಿಹಾರ ಕೊಡಬೇಕು ಎಂಬುದರ ಬಗ್ಗೆ ಸಲಹೆ ಕೊಡಬೇಕು ಎಂದ ಶಾಸಕ ಕೋನರೆಡ್ಡಿ, ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮಹದಾಯಿ ಯೋಜನೆ ಜಾರಿಮಾಡಲು ಒಂದು ತಿಂಗಳು ಸಾಕಾಗುತ್ತದೆ. ಈ ಮುಂದಿನ ಒಂದು ವರ್ಷದಲ್ಲಿ ಮಹದಾಯಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X