ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿ ಕೆ ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

Advertisements

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ ಗೊಂದಲಮಯ ವ್ಯಕ್ತಿತ್ವದ ವ್ಯಕ್ತಿ. ನಾನು ರಾಜ್ಯಕ್ಕೆ ಭೇಟಿ ನೀಡುವುದನ್ನು ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ನವೆಹಲಿಗೆ ಆಗಮಿಸಿದ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿ, “ನಾನು ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡಕ್ಕೆ ಭೇಟಿ ನೀಡಿದಾಗ, ಈ ಮನುಷ್ಯ ಏತಕ್ಕೆ ಬಂದಿದ್ದಾರೆ. ಮಿಲಿಟರಿಯನ್ನು ಕರೆದುಕೊಂಡು ಬರಬೇಕಿತ್ತು. ಒಬ್ಬರೇ ಬಂದು ಏನು ಮಾಡುತ್ತಾರೆ?” ಎಂದೆಲ್ಲಾ ಲಘುವಾಗಿ ಹೇಳಿಕೆ ನೀಡಿದ್ದರು” ಎಂದರು.

“ಕೇಂದ್ರ ಸರಕಾರದ ನಿರ್ದೇಶನ ಹಾಗೂ ರಾಜ್ಯ ಸರಕಾರದ ಅಪೇಕ್ಷೆಯಂತೆ ನಲವತ್ತಕ್ಕೂ ಹೆಚ್ಚು ಯೋಧರು ಬೆಳಗಾವಿಯಿಂದ ತೆರಳಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರ ಹೇಳಿಕೆಗಳನ್ನು ಗಮನಿಸಿದರೆ ಅವರೊಬ್ಬ ಗೊಂದಲದ ವ್ಯಕ್ತಿ ಎನ್ನುವುದು ತಿಳಿಯುತ್ತದೆ” ಎಂದು ಕುಮಾರಸ್ವಾಮಿ ಕುಟುಕಿದರು.

Advertisements

“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಸರಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಪ್ಪಿದಂತಾಗಿದೆ. ಈಗ ಅವರು ತಾಯಿ ಚಾಮುಂಡೇಶ್ವರಿಯನ್ನು ನೆನಪು ಮಾಡಿಕೊಂಡಿದ್ದಾರೆ. ಸರ್ವಪಕ್ಷ ಸಭೆಗೆ ನಾನು ಹೋಗಲಿಲ್ಲ ಎಂದು ಟೀಕೆ ಮಾಡಿದ್ದರು. ನಮ್ಮನ್ನು ಸರ್ವಪಕ್ಷ ಸಭೆಗೆ ಕರೆಯುವುದಕ್ಕೆ ಮೊದಲೇ ನೆರೆ ರಾಜ್ಯಕ್ಕೆ ನೀರು ಹರಿಸಿ ಆಗಿತ್ತು. ನೀರು ಬಿಟ್ಟಾದ ಮೇಲೆ ಅವರು ನಮ್ಮನ್ನು ಕರೆಸಿ ಮಾತನಾಡುವುದು ಏನಿದೆ” ಎಂದು ಪ್ರಶ್ನಿಸಿದರು.

ತಮಿಳುನಾಡು ಸಿಎಂಗೆ ಕಿವಿಮಾತು

“ನಾನು ತಮಿಳುನಾಡು ಮುಖ್ಯಮಂತ್ರಿ ಅವರಿಗೆ ಹಾಗೂ ಅಲ್ಲಿನ ರಾಜಕಾರಣಿಗಳಿಗೆ ಹೇಳುವುದಿಷ್ಟೇ. ಈ ಮಾತನ್ನು ನಾನು ಕೇಂದ್ರ ಸಚಿವನಾಗಿ ಹೇಳುತ್ತಿಲ್ಲ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಐದಾರು ದಿನಗಳಿಂದ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಪ್ರತೀದಿನ ಎಂಟರಿಂದ ಹತ್ತು ಟಿಎಂಸಿ ನೀರು ನೆರೆರಾಜ್ಯಕ್ಕೆ ಹರಿದುಹೋಗಿದೆ. ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ಎಷ್ಟೆಲ್ಲಾ ನೀರು ಹರಿಸಬೇಕಾಗಿತ್ತೋ ಅಷ್ಟೂ ನೀರನ್ನು ಈ ತಿಂಗಳಲ್ಲಿ ಸಂಪೂರ್ಣವಾಗಿ ಹರಿಸಲಾಗಿದೆ. ಕಾವೇರಿ ಜಲ ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಹೇಳಿದ್ದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ನಾನು ತಮಿಳುನಾಡು ಮುಖ್ಯಮಂತ್ರಿಗಳಿಗೆ ಹೇಳುವುದು ಇಷ್ಟೇ. ಸುಖಾಸುಮ್ಮನೆ ಕಾಲು ಕೆರೆದು ಜಗಳಕ್ಕೆ ಬರಬೇಡಿ” ಎಂದರು.

“ವ್ಯರ್ಥವಾಗಿ ಸಮುದ್ರಕ್ಕೆ ಸೇರುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ, ಎರಡೂ ರಾಜ್ಯಗಳ ರೈತರಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಮೇಕೆದಾಟು ಯೋಜನೆ ನಿರ್ಮಾಣ ಆಗಬೇಕಿದೆ. ಅನೇಕ ವರ್ಷಗಳಿಂದ ಈ ಬಗ್ಗೆ ತಮಿಳುನಾಡು ಆಕ್ಷೇಪ ತೆಗೆಯುತ್ತಿದೆ. ಇದರ ಬಗ್ಗೆ ತಮಿಳುನಾಡು ಸರಕಾರ ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಕುಮಾರಸ್ವಾಮಿ ಕಿವಿಮಾತು ಹೇಳಿದರು.

ರಾಜ್ಯ ಸರಕಾರದಿಂದ ಚಿಲ್ಲರೆ ರಾಜಕಾರಣ

“ನೀರಿನ ವಿಷಯದಲ್ಲಿಯೂ ರಾಜ್ಯ ಕಾಂಗ್ರೆಸ್‌ ಸರಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ನಾವೆಂದೂ ಚಿಲ್ಲರೆ ರಾಜಕಾರಣ ಮಾಡಿಲ್ಲ. ಅತ್ಯಂತ ಕೆಟ್ಟ ರೀತಿಯಲ್ಲಿ ಕೇಂದ್ರದ ಸಚಿವರನ್ನು ನಡೆಸಿಕೊಳ್ಳುವುದು, ಲಘುವಾಗಿ ಮಾತನಾಡುವುದು ಶೋಭೆಯಲ್ಲ. ಇಂಥ ನಡವಳಿಕೆಯನ್ನು ಪ್ರತಿದಿನವೂ ನಾನು ಕಾಣುತ್ತಿದ್ದೇನೆ. ಮೊದಲು ಇಂಥ ರಾಜಕಾರಣವನ್ನು ನಿಲ್ಲಿಸಿ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ನಡವಳಿಕೆ ಅಳವಡಿಸಿಕೊಳ್ಳಿ” ಎಂದು ಕುಮಾರಸ್ವಾಮಿ ಡಿಕೆಶಿಗೆ ತಿರುಗೇಟು ಕೊಟ್ಟರು.

ಕಾವೇರಿ ಆರತಿಗೆ ಸ್ವಾಗತ

ಗಂಗಾ ಆರತಿ ಮಾದರಿಯಲ್ಲಿಯೇ ಕಾವೇರಿ ಆರತಿ ನೆರೆವೇರಿಸಲಾಗುವುದು ಎಂದು ಡಿಸಿಎಂ ಡಿಕೆಶಿ ಹೇಳಿರುವುದನ್ನು ಸ್ವಾಗತಿಸಿ ಮಾತನಾಡಿ, “ಒಳ್ಳೆಯದೇ. ಬೇಡ ಎಂದವರು ಯಾರು? ಗಂಗಾ ಆರತಿ ಎನ್ನುವುದು ಒಂದು ಪವಿತ್ರವಾದ ಕಾರ್ಯಕ್ರಮ. ಆ ಕಾರ್ಯಕ್ರಮವನ್ನು ಅಳವಳಡಿಸಿಕೊಂಡರಷ್ಟೇ ಸಾಲದು, ಪ್ರತೀ ಕುಟುಂಬಕ್ಕೆ ಬೆಳಕು ನೀಡುವ ರೀತಿಯಲ್ಲಿ ಗಂಗಾ ಆರತಿ ಮಾಡುವುದು ಸೂಕ್ತ. ಅದಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಗಂಗಾ ಆರತಿ ಅಂತ ಹೇಳಿ, ಇನ್ನೊಂದೆಡೆ ಭಯಭಕ್ತಿ ಇಲ್ಲದೆ ಜನಗಳ ಜತೆ ಚಲ್ಲಾಟ ಆಡುವುದು ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X