ಮೈಕ್ರೋಸಾಫ್ಟ್ ಬಳಿಕ ಈಗ ಯೂಟ್ಯೂಬ್ ಡೌನ್; ಮೀಮ್ಸ್‌ಗಳನ್ನು ಹಂಚಿಕೊಂಡ ನೆಟ್ಟಿಗರು

Date:

Advertisements

ಮೈಕ್ರೋಸಾಫ್ಟ್ ಬಳಿಕ ಈಗ ಭಾರತದಲ್ಲಿ ಕೆಲವು ಬಳಕೆದಾರರಿಗೆ ಯೂಟ್ಯೂಬ್ ಡೌನ್ ಆಗಿದ್ದು ಕೆಲವು ಯೂಟ್ಯೂಬ್ ಬಳಕೆದಾರರಿಗೆ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಯೂಟ್ಯೂಬ್ ಅಪ್ಲಿಕೇಶನ್, ವೆಬ್‌ಸೈಟ್ ಬಳಸುವಾಗ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವಾಗ ಸಮಸ್ಯೆ ಎದುರಾಗಿದೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ 1.30 ಗಂಟೆಯಿಂದ ಯೂಟ್ಯೂಬ್‌ನಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು ಮಧ್ಯಾಹ್ನ 3.15 ಗಂಟೆ ವೇಳೆಗೆ ಹಲವಾರು ಮಂದಿ ಯೂಟ್ಯೂಬ್ ಬಳಕೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್‌ಗಳನ್ನು ಹಂಚಿಕೊಂಡಿದ್ದಾರೆ.

ವೆಬ್‌ಸೈಟ್‌ನ ಪ್ರಕಾರ ಶೇಕಡ 43ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಶೇಕಡ 33ರಷ್ಟು ಬಳಕೆದಾರರಿಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಶೇಕಡ 23ರಷ್ಟು ಬಳಕೆದಾರರಿಗೆ ಯೂಟ್ಯೂಬ್ ವೆಬ್‌ಸೈಟ್‌ನಲ್ಲಿ ಸಮಸ್ಯೆ ಕಂಡುಬಂದಿದೆ.

Advertisements

ಪ್ರಸ್ತುತ ಯೂಟ್ಯೂಬ್‌ನಲ್ಲಿ ಯಾವ ಸಮಸ್ಯೆ ಉಂಟಾಗಿದೆ ಎಂಬುವುದು ತಿಳಿದುಬಂದಿಲ್ಲ. ಈ ಬಗ್ಗೆ ಯೂಟ್ಯೂಬ್‌ ಸಪೋರ್ಟ್‌ ಪೇಜ್‌ನಲ್ಲಿ ಅಥವಾ ಸಾಮಾಜಿಕ ಮಾಧ್ಯಮ ಚಾನಲ್‌ಗಳಲ್ಲಿ ಯಾವುದೇ ವರದಿ ಮಾಡಲಾಗಿಲ್ಲ.

ಯೂಟ್ಯೂಬ್‌ನಲ್ಲಿ ಸಮಸ್ಯೆಯನ್ನು ಎದುರಿಸುತ್ತಿರುವ ನೆಟ್ಟಿಗರು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ವಿಡಿಯೋ ಅಪ್‌ಲೋಡ್ ಮಾಡಿದ ಬಳಿಕ ಅಪ್‌ಲೋಡ್‌ ಫೀಡ್‌ನಲ್ಲಿ (sic) ವಿಡಿಯೋಗಳು ಕಾಣಿಸುತ್ತಿಲ್ಲ, ಆದರೆ ಅಪ್‌ಲೋಡ್ ಆಗಿದೆ” ಎಂದು ಹೇಳಿದರೆ, ಇನ್ನು ಕೆಲವು ನೆಟ್ಟಿಗರು “ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ. ಸದ್ಯ ಎಕ್ಸ್‌ನಲ್ಲಿ (ಟ್ವಿಟ್ಟರ್‌) ಮೀಮ್ಸ್‌ಗಳು ಹರಿದಾಡುತ್ತಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X