ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

Date:

Advertisements

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

“ಕಳ್ಳ ಮನೆಗೆ ನುಗ್ಗಿದ ಮೇಲೆ ಎಷ್ಟು ಕದ್ದ ಎಂಬುದು ಪ್ರಶ್ನೆಯಲ್ಲ. ಹಿಂದಿನ ಬಾಗಿಲಿಂದ ಬಂದನೇ? ಮುಂದಿನ ಬಾಗಿಲಿಂದ ನುಗ್ಗಿದನೇ ಎಂಬ ಪ್ರಶ್ನೆಯಿಲ್ಲ. ಕದ್ದಿದ್ದು ನಿಜ. ಲೂಟಿ ಆಗಿರುವುದು ನಿಜ” ಎಂದರು.

Advertisements

“ಖಜಾನೆ ಲೂಟಿ ಮಾಡುವುದು, ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಹಣವನ್ನು ಖಾಸಗಿ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಹಣ ಪಡೆದು ಬಳಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಗೊತ್ತಿದೆ. ಈಗ ಸಿಕ್ಕಿಬಿದ್ದಿದ್ದಾರೆ. ನಾವು ನೂರು ಹೋರಾಟ ಮಾಡಿದರೆ, ಅವರು ಹುಡುಕಿ ಒಂದಾದರೂ ಹೋರಾಟ ಮಾಡಬೇಕಲ್ಲವೇ? ಅದಕ್ಕಾಗಿಯೇ ಇವತ್ತು ಇ.ಡಿ. ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅದರಲ್ಲಿ ಹುರುಳಿಲ್ಲ” ಎಂದು ಹೇಳಿದರು.

“ಇ.ಡಿ, ಸಿಬಿಐ ತಂದದ್ದು ಕಾಂಗ್ರೆಸ್ ಸರಕಾರ ಅಲ್ಲವೇ? ತಂದ ಮೇಲೆ ನೀವು ಕೆಲಸ ಮಾಡಬೇಡಿ ಎನ್ನುವುದಾದರೆ, ಆ ಮಾತನಾಡಲು ಅವರಿಗೆ ಏನು ಯೋಗ್ಯತೆ ಇದೆ? ಸಿದ್ದರಾಮಯ್ಯನವರು ಮನೆಗೆ ಹೋಗುವ ಕಾಲ ಬಂದಿದೆ. ಅದಕ್ಕಾಗಿ ಅಧಿಕಾರ ಉಳಿಸಿಕೊಳ್ಳಲು ಇಷ್ಟೆಲ್ಲ ನಾಟಕ ಆಡುತ್ತಿದ್ದಾರೆ” ಎಂದು ಹೇಳಿದರು.

“ಬಿಜೆಪಿಯಲ್ಲಿ ಯೋಗ ನಡೆಯುವುದಿಲ್ಲ; ಯೋಗ್ಯತೆಗೆ ಅವಕಾಶ ಕೊಡುತ್ತಾರೆ. ಇಂಥ ಸ್ಥಾನಕ್ಕೆ ಬರಲು ಕಾಂಗ್ರೆಸ್ಸಿನಲ್ಲಿ ಯೋಗ ಮತ್ತು ಕೆಲವೊಂದು ವಿದ್ಯೆಗಳೂ ಬೇಕು. ಪಕ್ಷ ನಿಷ್ಠೆ, ಬದ್ಧತೆಯನ್ನು ಗುರುತಿಸಿ ನನಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ತಳ ಸಮುದಾಯಗಳನ್ನು ಸಂಘಟಿಸಿ ಪಕ್ಷ ಸಂಘಟನೆಗೆ ಶ್ರಮಿಸುವೆ” ಎಂದು ತಿಳಿಸಿದರು.

“ಸರಕಾರ ಮಾಡುವ ತೊಂದರೆ, ನ್ಯೂನತೆಗಳನ್ನು ಸಮಾಜಕ್ಕೆ ತಿಳಿಸುವೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಮಾಡಿದ ಅನ್ಯಾಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಈ ಜವಾಬ್ದಾರಿ ಕೊಟ್ಟ ಪಕ್ಷದ ಮುಖಂಡರಿಗೆ, ಇದಕ್ಕೆ ಕಾರಣಕರ್ತರಾದ ಪರಿಶಿಷ್ಟ ಸಮುದಾಯದ ಎಲ್ಲರಿಗೂ ಧನ್ಯವಾದ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಜನಿವಾರ ಕಟ್ಟಿಕೊಂಡ ಸೋ ಕಾಲ್ಡ್ ದಲಿತ ನಾಯಕ,,ಮನುವಾದ ಅಪ್ಪಿಕೊಂಡ ಇಂಥವರು ದಲಿತ ವರ್ಗಗಳಿಗೆ ಅನ್ಯಾಯ ಮಾಡುವ ಸಾಧ್ಯತೆಗಳೇ ಹೆಚ್ಚು,,, ತಮ್ಮ ರಾಜಕೀಯ ಲಾಭಕ್ಕಾಗಿ ಇಡೀ ಸಮುದಾಯವನ್ನು ಶೋಷಣೆ ಮಾಡುವವರ ಪಾದಕ್ಕೆ ಅರ್ಪಿಸುವ ಮಹಾನ್ ಚೇತನಗಳಿವರು,,ಎಷ್ಟೇ ಶತಮಾನಗಳು ಕಳೆದರೂ ದಲಿತರು ಹಿಂದುಳಿದವರು ಇನ್ನೂ ಪುರೋಹಿತರ ಚೌಕಿದರಕಿ ಮಾಡುವುದರಲ್ಲಿ ತಮ್ಮ ಮುಕ್ತಿ ಕಾಣುವರು,,ಈ ಎಂ ಎಲ್ ಸಿ ಉತ್ತಮ ಉದಾಹರಣೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X