ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲ; ನೀಟ್ – ಯುಜಿ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದ ಸುಪ್ರೀಂ

Date:

Advertisements

ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್‌ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್‌ – ಯುಜಿ ಮರುಪರೀಕ್ಷೆ ನಡೆಸಿದರೆ ಈಗಾಗಲೇ ಹಾಜರಾಗಿದ್ದ 24 ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೋರ್ಟ್ ಒತ್ತಿ ಹೇಳಿತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ಸದಸ್ಯರ ಪೀಠ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಅಕ್ರಮಗಳ ಆಧಾರದ ಮೇಲೆ ಮೇ 5 ರಂದು ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ವಿಚಾರಣೆ ನಡೆಸಿ ತೀರ್ಪನ್ನು ಆದೇಶಿಸಿದರು.

ತೀರ್ಪು ನೀಡುವ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ರಾಷ್ಟ್ರೀಯ ಪರೀಕ್ಷಾ ಮಂಡಳಿ ಹಾಗೂ ಐಐಟಿ ಮದ್ರಾಸ್‌ ಪ್ರಸ್ತುತಪಡಿಸಿದ ಅಂಕಿಅಂಶಗಳನ್ನು ಪರಿಶೀಲಿಸಲಾಗಿದ್ದು, ಬೃಹತ್‌ ಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | RSS ನಿಷೇಧ ತೆರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆಯೇ?

“ಈ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆಯ ಪಾವಿತ್ರ್ಯತೆಯ ಮೇಲೆ ಧಕ್ಕೆಯಾಗಿದೆ ಎಂಬುದನ್ನು ನಿರ್ಧರಿಸಲು ಸಾಕಷ್ಟು ದಾಖಲೆಗಳ ಕೊರತೆಯಿದೆ. ಸಿಬಿಐ ಕೈಗೊಂಡಿರುವ ವಿಚಾರಣೆ ಇನ್ನು ಅಂತಿಮತೆಯನ್ನು ತಲುಪಿಲ್ಲ. ಕೋರ್ಟ್‌ ಕೂಡ ಕೇಂದ್ರ ಸರ್ಕಾರ 571 ನಗರಗಳ 4750 ಕೇಂದ್ರಗಳ ಫಲಿತಾಂಶದಲ್ಲಿ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ. ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ ತನ್ನ ಸ್ಥಾನವನ್ನು ಸೂಚಿಸುವ ಐಐಟಿ ಮದ್ರಾಸ್‌ನ ವಿಶ್ಲೇಷಣೆಯನ್ನು ಸರ್ಕಾರ ದಾಖಲಿಸಿದೆ” ಎಂದು ಮುಖ್ಯ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಹಜಾರಿಭಾಗ್‌ ಹಾಗೂ ಪಾಟ್ನಾದಲ್ಲಿ ಸೋರಿಕೆಯಾದ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ರೀತಿಯ ವಿವಾದವಿರಲ್ಲಿಲ್ಲ. ಈ ಕೇಂದ್ರದಲ್ಲಿ ಹಾಜರಾಗಿದ್ದ 155 ವಿದ್ಯಾರ್ಥಿಗಳು ಪತ್ರಿಕೆ ಸೋರಿಕೆಯಿಂದ ಪ್ರತ್ಯಕ್ಷವಾಗಿ ಪ್ರಯೋಜನ ಪಡೆದಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರಯೋಜನ ಪಡೆದವರ ಬಗ್ಗೆ ಸಿಬಿಐ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಒಂದು ವೇಳೆ ಮರು ಪರೀಕ್ಷೆ ಕೈಗೊಂಡರೆ ಪ್ರವೇಶ ದಿನಾಂಕದಲ್ಲಿ ತೊಂದರೆ, ವೈದ್ಯಕೀಯ ಕೋರ್ಸ್‌ನಲ್ಲಿ ಪರಿಣಾಮ, ಭವಿಷ್ಯದಲ್ಲಿ ಉತ್ತಮ ವೃತ್ತಿಪರರ ಧಕ್ಕೆ ಹಾಗೂ ಮೀಸಲಾತಿ ಆಧಾರದಲ್ಲಿ ಆಯ್ಕೆಯಾದ ತುಳಿತಕ್ಕೆ ಒಳಗಾದ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆಯಾಗಲಿದೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X