ದಾವಣಗೆರೆ | ವೈದ್ಯರ ಕರ್ತವ್ಯಕ್ಕೆ ಅಡ್ಡಿ ನೆಪ; ದಲಿತ ಮಹಿಳೆ, ಗ್ರಾಕೂಸ್ ಕಾರ್ಯಕರ್ತರ ಮೇಲೆ ಹಲ್ಲೆ; ಆರೋಪ

Date:

Advertisements

ಗ್ರಾಮೀಣ ಕೂಲಿಕಾರರ ಸಂಘಟನೆ(ಗ್ರಾಕೂಸ್)ಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಸಂಯೋಜಕಿ, ದಲಿತ ನಾಯಕಿ ಸುಧಾ ಪಲ್ಲಾಗಟ್ಟಿ ಎಂಬುವವರ ಮೇಲೆ ವೈದ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ನೆಪವೊಡ್ಡಿ, ಗ್ರಾಮದ ಕೆಲವರು ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಕೋವಿಡ್ ಸಂದರ್ಭದಲ್ಲಿ ಪಲ್ಲಾಗಟ್ಟಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಬಸವಂತಪ್ಪ ಎಂಬುವವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ತಾಲೂಕು ವೈದ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ಕಳೆದ ಜುಲೈ 16ರಂದು ಸುಧಾ ಪಲ್ಲಾಗಟ್ಟಿಯವರು ಚಿಕಿತ್ಸೆಗೆಂದು ವೃದ್ದೆಯೊಬ್ಬರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದರು. ಕೋವಿಡ್ ಸಂದರ್ಭದಲ್ಲಿ ವಿರುದ್ಧ ಮಾಡಿದ್ದ ಆರೋಪವನ್ನೇ ನೆಪವಾಗಿರಿಸಿಕೊಂಡು ವೈದ್ಯಾಧಿಕಾರಿ ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸುಧಾ ಪಲ್ಲಾಗಟ್ಟಿಯವರು ವಿಡಿಯೋವೊಂದನ್ನು ಮಾಡಿಕೊಂಡಿದ್ದಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಇಂದು ಗ್ರಾಕೂಸ್ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಆಸ್ಪತ್ರೆಗೆ ಬಂದು, ನಿಂದಿಸಿದ ಬಗ್ಗೆ ವೈದ್ಯಾಧಿಕಾರಿಗಳ ಬಳಿ ಪ್ರಶ್ನಿಸಲೆಂದು ಹೋಗಿದ್ದಾರೆ. ಈ ವೇಳೆ ವೈದ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.

Advertisements

ಆ ಬಳಿಕ ಹಲ್ಲೆಗೆ ಮುಂದಾದವರೇ, ವೈದ್ಯಾಧಿಕಾರಿಗಳಿಂದ ದೂರು ನೀಡಿಸಿದ್ದಾರೆ. ಆ ಬಳಿಕ ಬಿಳಿಚೋಡು ಪೊಲೀಸ್ ಠಾಣೆಯವರು, ಗ್ರಾಕೂಸ್ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು ಎಂದು ತಿಳಿದುಬಂದಿದೆ.

ಗ್ರಾಕೂಸ್ 1

ಸಿಕ್ಕಿರುವ ಮಾಹಿತಿಯ ಪ್ರಕಾರ, ಡಾಕ್ಟರ್ ಅವರನ್ನು ಗ್ರಾಕೂಸ್ ಕಾರ್ಯಕರ್ತರು ಪ್ರಶ್ನಿಸಲು ಹೋಗಿದ್ದಾಗ ಅಲ್ಲಿಗೆ ಬಂದ ಊರಿನ ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಸದಸ್ಯರು, ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಗ್ರಾಮೀಣ ಕೂಲಿಕಾರರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಧಾ ಪಲ್ಲಾಗಟ್ಟಿ, ಕೂಲಿಕಾರರಿಗೆ ಪಂಚಾಯಿತಿಗಳಿಂದ ಕೆಲಸ ಕೊಡಿಸುವ ಕಾರ್ಯವನ್ನು ಮಾಡುತ್ತಿದ್ದರು. ಅಲ್ಲದೇ, ಗ್ರಾಮ ಪಂಚಾಯತ್‌ನಲ್ಲಿನ ಅವ್ಯವಹಾರಗಳನ್ನು ತಡೆಯಲು ಕೂಡ ಶ್ರಮಿಸುತ್ತಿದ್ದರು. ಇದು ಕೆಲವರ ಕಣ್ಣು ಕೆಂಪಗಾಗಿಸಿತ್ತು. ಇದೇ ಅವಕಾಶವನ್ನು ಬಳಸಿಕೊಂಡ ಗ್ರಾಮದ ಕೆಲವರು, ಈ ಪ್ರಕರಣವನ್ನು ದಾಳವಾಗಿ ಬಳಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ವೈದ್ಯಾಧಿಕಾರಿಗಳ ದೂರಿನ ಮೇರೆಗೆ ಗ್ರಾಕೂಸ್ ಕಾರ್ಯಕರ್ತೆ ಸುಧಾ, ಇತರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆ ಬಳಿಕ ಠಾಣೆಯಲ್ಲಿ ರಾಜಿ ಪಂಚಾಯತಿ ನಡೆಸಿದ ಪೊಲೀಸರು, ಸದ್ಯ ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.

ಅಲ್ಲದೇ, ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದು, ಇನ್ನು ಮುಂದೆ ಇಂತಹ ವಾಗ್ವಾದವನ್ನು ಮುಂದುವರಿಸದಂತೆ ಹಾಗೂ ಯಾವುದೇ ಕೆಲಸಗಳಿಗೆ ಅಡ್ಡಿಪಡಿಸದೇ ಕಾರ್ಯ ನಿರ್ವಹಿಸಲು ಬಿಳಿಚೋಡು ಪೊಲೀಸ್ ಠಾಣೆಯವರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿ: ವಿನಾಯಕ್, ದಾವಣಗೆರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X