ನೀಟ್-ಯುಜಿ ಅಂತಿಮ ಫಲಿತಾಂಶ ಎರಡು ದಿನಗಳಲ್ಲಿ ಪ್ರಕಟ: ಧರ್ಮೇಂದ್ರ ಪ್ರಧಾನ್

Date:

Advertisements

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23) ಸುಪ್ರೀಂ ಕೋರ್ಟ್‌ನ ಅವಲೋಕನಗಳ ಆಧಾರದ ಮೇಲೆ ನೀಟ್-ಯುಜಿ ಮೆರಿಟ್ ಪಟ್ಟಿಯನ್ನು ನವೀಕರಿಸಲಾಗುವುದು ಎಂದು ಹೇಳಿದ್ದಾರೆ.

ನೀಟ್‌-ಯುಜಿ 2024 ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ನಡೆಸುವುದನ್ನು ನಿರಾಕರಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ನೀಟ್-ಯುಜಿ ಪರೀಕ್ಷೆಯ ಫಲಿತಾಂಶಗಳು ಅಮಾನ್ಯವಾಗಿದೆ ಅಥವಾ ಪರೀಕ್ಷೆಯ ಸಮಗ್ರತೆಯ ಪ್ರಮುಖ ಉಲ್ಲಂಘನೆಯಾಗಿದೆ ಎಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದಾದ ಬೆನ್ನಲ್ಲೇ ನೀಟ್-ಯುಜಿ ಫಲಿತಾಂಶಗಳ ಬಗ್ಗೆ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. “ಯಾರಾದರೂ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಅವರನ್ನು ಬಿಡಲಾಗುವುದಿಲ್ಲ. ಯಾವುದೇ ರೀತಿಯ ಉಲ್ಲಂಘನೆಯಾದರೂ ಸಹಿಸಲಾಗದು. ಪರೀಕ್ಷೆಗಳ ಪಾವಿತ್ರ್ಯತೆ ನಮಗೆ ಅತ್ಯುನ್ನತವಾಗಿದೆ” ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ: ಏಮ್ಸ್-ಪಾಟ್ನಾದ ಮೂವರು ವಿದ್ಯಾರ್ಥಿಗಳು ಸಿಬಿಐ ವಶಕ್ಕೆ

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಆಪಾದಿತ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದೆ. ಪ್ರಸ್ತುತ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಂಪೂರ್ಣ ಪರೀಕ್ಷೆಯನ್ನು ರದ್ದುಗೊಳಿಸುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ಇನ್ನು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೇಂದ್ರೀಯ ತನಿಖಾ ದಳವು ಸುಪ್ರೀಂ ಕೋರ್ಟ್‌ಗೆ ದೃಢಪಡಿಸಿದೆ. ಜೂನ್‌ನಲ್ಲಿ ಪ್ರಕರಣದ ತನಿಖೆ ಆರಂಭಿಸಿದ ನಂತರ ಸಿಬಿಐ ನೀಡಿದ ಮೊದಲ ಅಧಿಕೃತ ಹೇಳಿಕೆ ಇದಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X