ಕೇಂದ್ರ ಬಜೆಟ್ ವಿರುದ್ಧ ಇಂದು ಸಂಸತ್ತಿನಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

Date:

Advertisements

ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ ‘ತಾರತಮ್ಯ’ ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು (ಜುಲೈ 24) ಸಂಸತ್ತಿನಲ್ಲಿ ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆಯನ್ನು ನಡೆಸಲಿದೆ.

ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ತನ್ನ ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಆಡಳಿತವಿರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮೀಸಲಾಗಿ ಬಹುತೇಕ ಯೋಜನೆಗಳನ್ನು ಘೋಷಿಸಿದೆ. ಕರ್ನಾಟಕ, ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ. ವಿಪಕ್ಷಗಳನ್ನು ಇದನ್ನು ತೀವ್ರವಾಗಿ ವಿರೋಧಿಸಿದೆ.

ಇಂಡಿಯಾ ಒಕ್ಕೂಟವು ಬಜೆಟ್ ವಿಚಾರದಲ್ಲಿಉನ್ನತ ಮಟ್ಟದ ಸಭೆ ನಡೆಸಿದ್ದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉಭಯ ಸದನಗಳಲ್ಲಿ ಕಾಂಗ್ರೆಸ್‌ನ ಉಪನಾಯಕರಾದ ಪ್ರಮೋದ್ ತಿವಾರಿ ಮತ್ತು ಗೌರವ್ ಗೊಗೋಯ್, ಎನ್‌ಸಿಪಿ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾಗಿಯಾಗಿದ್ದರು.

Advertisements

ಇದನ್ನು ಓದಿದ್ದೀರಾ?  Protestಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಹಾಗೆಯೇ ಟಿಎಂಸಿಯ ಡೆರೆಕ್ ಓಬ್ರಿಯಾನ್ ಮತ್ತು ಕಲ್ಯಾಣ್ ಬ್ಯಾನರ್ಜಿ, ಡಿಎಂಕೆಯ ಟಿಆರ್ ಬಾಲು, ಜೆಎಂಎಂನ ಮಹುವಾ ಮಜಿ, ಎಎಪಿಯ ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್, ಸಿಪಿಐ(ಎಂ)ನ ಜಾನ್ ಬ್ರಿಟಾಸ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಬಜೆಟ್‌ನಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ವೇಣುಗೋಪಾಲ್, “ಈ ವರ್ಷದ ಕೇಂದ್ರ ಬಜೆಟ್‌ ಈಗಾಗಲೇ ಬಜೆಟ್‌ನ ಪರಿಕಲ್ಪನೆಯನ್ನು ನಾಶಪಡಿಸಿದೆ. ಬಹುತೇಕ ರಾಜ್ಯಗಳ ವಿರುದ್ಧ ಸಂಪೂರ್ಣವಾಗಿ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಇಂಡಿಯಾ ಒಕ್ಕೂಟವು ಈ ಬಜೆಟ್ ವಿರುದ್ಧ ಪ್ರತಿಭಟಿಸುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

ತಮ್ಮ ಪ್ರತಿಭಟನೆಯ ಭಾಗವಾಗಿ ವಿಪಕ್ಷ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಜುಲೈ 27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ. “ಈ ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ನಿಜ, ತಾರತಮ್ಯದ ಬಣ್ಣಗಳನ್ನು ಮರೆಮಾಡಲು ವಿನ್ಯಾಸಗೊಳಿಸಲಾದ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ವೇಣುಗೋಪಾಲ್ ತಿಳಿಸಿದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X