ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

Date:

Advertisements

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, 34 ವರ್ಷದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆರೋಪಿ ಇರ್ಫಾನ್ ಖಾನ್ ಬಾಲಕಿಯ ದೂರದ ಸಂಬಂಧಿಯಾಗಿದ್ದು, ಬಾಲಕಿಗೆ ಐಸ್‌ಕ್ರೀಮ್ ಕೊಡಿಸುವ ಆಮಿಷ ಒಡ್ಡಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ. ಮೃತದೇಹವನ್ನು ರಸ್ತೆಬದಿಯಲ್ಲಿ ಎಸೆದಿದ್ದಾನೆ ಎಂದು ವರದಿಯಾಗಿದೆ.

ಬಾಲಕಿಯ ತಾಯಿ ಶನಿವಾರ ಸಂಜೆಯವರೆಗೂ ತನ್ನ ಮಗಳ ಹುಡುಕಾಟ ನಡೆಸಿದ್ದಾರೆ. ನೆರೆಹೊರೆಯಲ್ಲಿದ್ದ ಹಲವಾರು ಮಂದಿಯ ಬಳಿ ಕೇಳಿದಾಗ ಕೊನೆಯದಾಗಿ ಬಾಲಕಿಯನ್ನು ಆರೋಪಿ ಇರ್ಫಾನ್ ಜೊತೆ ನೋಡಿರುವುದಾಗಿ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

ಇರ್ಫಾನ್‌ಗೆ ಬಾಲಕಿಯ ತಾಯಿ ಕರೆ ಮಾಡಿದಾಗ ಆತ ತಬ್ಬಿಬ್ಬಾಗಿ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ತನ್ನ ಮಗಳು ನಾಪತ್ತೆಯಾಗಿರುವ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆಯೇ ರಸ್ತೆ ಬದಿಯಲ್ಲಿ ಬಾಲಕಿಯ ಮೃತದೇಹ ಕಂಡುಬಂದಿದೆ.

ಸಿಸಿಟಿವಿ ದೃಶ್ಯ ಮತ್ತು ಇತರ ತಾಂತ್ರಿಕ ಸುಳಿವುಗಳನ್ನು ಅನುಸರಿಸಿದ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಬಂಧಿಸಿದ್ದಾರೆ.

ಆರೋಪಿ ದಿನಗೂಲಿ ಕಾರ್ಮಿಕನಾಗಿದ್ದು ಆಗಾಗ್ಗೆ ಸಂತ್ರಸ್ತೆಯ ಮನೆಗೆ ಭೇಟಿ ನೀಡುತ್ತಿದ್ದ. ಈ ಹಿಂದೆ ಜೇಬುಗಳ್ಳತನ ಪ್ರಕರಣಗಳಲ್ಲಿ ಬಂಧಿತನಾಗಿದ್ದ. ಪೊಲೀಸರು ಆತನ ಮೇಲೆ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೊ ಕಾಯ್ದೆ ಕೂಡಾ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X