ನೇಪಾಳ | 19 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ; ಐವರ ಮೃತದೇಹ ಪತ್ತೆ

Date:

Advertisements

ನೇಪಾಳದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, 19 ಮಂದಿ ಪ್ರಯಾಣಿಕರಿದ್ದ ವಿಮಾನ ಟೇಕಾಫ್‌ ವೇಳೆ ಪತನಗೊಂಡಿರುವ ಘಟನೆ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಕಠ್ಮಂಡುನಿಂದ ಪೋಖರಾಗೆ ತೆರಳಬೇಕಿದ್ದ ಸೌರ್ಯ ಏರ್‌ಲೈಲ್ಸ್‌ಗೆ ಸೇರಿದ ವಿಮಾನ ಪತನಗೊಂಡಿದೆ. ಬೆಳಗ್ಗೆ 11 ಗಂಟೆಗೆ ಅಪಘಾತ ಸಂಭವಿಸಿದೆ. ಈವರೆಗೆ ಐದು ಮೃತದೇಹಗಳು ಪತ್ತೆಯಾಗಿವೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ನಿಖರವಾಗಿಲ್ಲ.

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಮಾನದ ಪೈಲಟ್ ಕ್ಯಾಪ್ಟನ್ ಮನೀಶ್ ಶಾಕ್ಯಾ (37) ಅವರನ್ನು ರಕ್ಷಿಸಲಾಗಿದ್ದು, ಸಿನಮಂಗಲದ ಆಸ್ಪತ್ರೆಗೆ ರವಾನಿಸಲಾಗಿದೆ.

Advertisements

 

ವಿಮಾನವು ಟೇಕಾಫ್‌ಗಾಗಿ ರನ್‌ವೇನಲ್ಲಿ ತೆರಳುವಾಗ ಸ್ಕಿಡ್ ಆಗಿ ಪತನಗೊಂಡಿದೆ. ಪತನವಾದ ತಕ್ಷಣ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಮತ್ತು ಭದ್ರತಾ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಬದುಕುಳಿದಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

 

ಈ ಹಿಂದೆ, 2023ರ ಜನವರಿಯಲ್ಲಿ ಪೊಖರಾ ಬಳಿ ಯೇತಿ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿತ್ತು. ದುರಂತ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 72 ಮಂದಿ ಪ್ರಾಣ ಕಳೆದುಕೊಂಡಿದ್ದರು. 2022ರ ಮೇ 29ರಂದು ತಾರಾ ಏರ್ ವಿಮಾನವು ಮುಸ್ತಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ, 22 ಮಂದಿ ಸಾವನ್ನಪ್ಪಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X