ಬುಡಕಟ್ಟು ಮಹಿಳೆಯರು ಹಿಂದೂಗಳಲ್ಲ, ಮಂಗಳಸೂತ್ರ ಧರಿಸಬಾರದು ಎಂದು ಹೇಳಿದ ಶಿಕ್ಷಕಿ ಅಮಾನತು

Date:

Advertisements

ಬುಡಕಟ್ಟು ಮಹಿಳೆಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಅವರಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿದ್ದ ಮಹಿಳಾ ಶಿಕ್ಷಕಿ ಮೇನಕಾ ದಮೋರ್‌ ಅವರನ್ನು ರಾಜಸ್ಥಾನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ರಾಜಸ್ಥಾನದ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಶಿಕ್ಷಣ ಇಲಾಖೆಯ ಕಳಂಕಕ್ಕೆ ಧಕ್ಕೆ ತಂದ ಆರೋಪದ ಮೇಲೆ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 19ರಂದು ಬನ್ಸ್‌ವಾರಾದ ಮನ್‌ಗ್ರಹ್‌ ಧಾಮ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ರ್ಯಾಲಿಯಲ್ಲಿ ಬುಡಕಟ್ಟು ಮಹಿಳೆಯರು ಪಂಡಿತರು ಹೇಳುವುದನ್ನು ಕೇಳಬಾರದು ಎಂದು ಹೇಳಿದ್ದರು.

Advertisements

“ಬುಡಕಟ್ಟು ಮಹಿಳೆಯರಿಗೆ ಕುಂಕುಮ ಅನ್ವಯವಾಗುವುದಿಲ್ಲ. ಅವರು ಮಂಗಳಸೂತ್ರ ಧರಿಸಬಾರದು. ಬುಡಕಟ್ಟು ಸಮುದಾಯದ ಮಹಿಳೆಯರು ಮತ್ತು ಹೆಣ್ಣುಮಕ್ಕಳು ಶಿಕ್ಷಣದ ಮೇಲೆ ಗಮನಹರಿಸಬೇಕು. ಇಂದಿನಿಂದ ಇವೆಲ್ಲ ಪದ್ಧತಿಗಳನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

ಮೇನಕಾ ದಮೋರ್‌ ಅವರ ಹೇಳಿಕೆಗಳಿಗೆ ಬುಡಕಟ್ಟು ಸಮುದಾಯದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ವಿಷಯದ ಬಗ್ಗೆ ಕ್ರಮ ಕೈಗೊಂಡು ಮಹಿಳೆಯನ್ನು ಅಮಾನತುಗೊಳಿಸಿದ್ದಾರೆ.

ಮೇನಕಾ ದಮೋರ್‌ ಅವರು ಆದಿವಾಸಿ ಪರಿವಾರ ಸಂಸ್ಥೆಯ ಸಂಸ್ಥಾಪಕರಾಗಿದ್ದು, ಸಾದಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಬನ್ಸ್‌ವಾರಾದ ಮನ್‌ಗ್ರಹ್‌ ಧಾಮ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ರ್ಯಾಲಿಯಲ್ಲಿ ರಾಜಸ್ಥಾನ, ಮಧ್ಯ ಪ್ರದೇಶ, ಗುಜರಾತ್ ಹಾಗೂ ಮಹಾರಾಷ್ಟ್ರದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಭಿಲ್‌ ಎಂಬ ರಾಜ್ಯವನ್ನು ರಚಿಸುವ ರಾಜಕೀಯ ನಿರ್ಣಯವನ್ನು ಇಲ್ಲಿ ಅಂಗೀಕರಿಸಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X