ಹಾಸನ | ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವು; ಪೋಷಕರ ಆಕ್ರಂದನ

Date:

Advertisements

ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಎಲ್ಲೆಡೆ ಮಳೆಯಾಗುತ್ತಿದ್ದು, ಅಪಾರ ಹಾನಿಯಾಗುತ್ತಿದೆ. ಮಳೆ, ಗಾಳಿ ಹೆಚ್ಚಾಗಿ ಜಾನುವಾರಗಳು ಮನೆ ಕಟ್ಟಡಗಳು ದುಃಸ್ತಿತಿಯಲ್ಲಿವೆ. ಬಹುತೇಕ ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿ ಗಿಡ ಮರಗಳಿಗೆ ತಗುಲಿ ಹಲವು ಕಡೆ ವಿದ್ಯುತ್ ಸ್ಪರ್ಶವಾಗುತ್ತಿದೆ.

ಅರಸೀಕೆರೆ ತಾಲೂಕಿನ ಕಾಮಸಮುದ್ರ ಗ್ರಾಮ ಪಂಚಾಯಿತಿ ಪಡುವನಹಳ್ಳಿ ಭೋವಿ ಕಾಲೋನಿಯಲ್ಲಿ ಶೇಖರ್ ಹಾಗೂ ಕರಿಯಮ್ಮ ದಂಪತಿಯ ಮಗಳು ತನುಜಾ(15) ಗುರುವಾರ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.

Advertisements

ಸ್ಥಳೀಯ ಮುಖಂಡ ಶಿವಣ್ಣ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶುಂಠಿ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ಮಗಳನ್ನು ನೋಡಬೇಕೆಂದು ಶಾಲೆಗೆ ರಜೆ ಮಾಡಿಸಿ, ಶುಂಠಿ ಜಮೀನಿನ ಬಳಿ ಕರೆಸಿಕೊಂಡಿದ್ದರು. ನೆನ್ನೆ ಸಂಜೆ 5:30ರ ಸಮಯದಲ್ಲಿ ಮಳೆ ಸುರಿಯುತ್ತಿರುವುದರಿಂದ ತೆಂಗಿನಮರದ ಬುಡದಲ್ಲಿ ತನುಜಾ ನಿಂತಿದ್ದಳು. ಮರ ಹಸಿಯಾಗಿದ್ದರಿಂದ ವಿದ್ಯುತ್ ತಂತಿ ಮರಕ್ಕೆ ತಗುಲಿದ್ದರಿಂದ ಪಕ್ಕದಲ್ಲಿದ್ದ ತನುಜಾಳಿಗೆ ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟಿದ್ದಾಳೆ. ಅಲ್ಲಿದ್ದ ಜನರು ಹಾಗೂ ಪೋಷಕರು ಕೂಡಲೇ ತಿಪಟೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಗಳ ಪ್ರಾಣ ಉಳಿಬಹುದೆಂದು ವೈದ್ಯರು ಪರೀಕ್ಷಿಸಿದ್ದಾರೆ. ಆದರೆ, ಅಷ್ಟರಲ್ಲೇ ತನುಜಾಳ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಿಢೀರ್ ಕುಸಿದ ಶಾಲೆಯ ಮೇಲ್ಛಾವಣಿ; ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

“ಕೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ದಂಪತಿ ಮಗಳಿಗೆ ವಿದ್ಯಾಭ್ಯಾಸ ಕೊಡಿಸಿ ವಿದ್ಯಾವಂತಾಳಾಗಿ ಮಾಡಬೇಕೆಂದು ಆಸೆಪಟ್ಟಿದ್ದ ಪೋಷಕರು ಇದೀಗ ಮಗಳನ್ನು ಕಳೆದುಕೊಂಡು ಗೋಳಾಡುತ್ತಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಗೂ ಪಡುವನಹಳ್ಳಿ ಭೋವಿ ಕಾಲೊನಿ ಜನರು ಹದಿಹರೆಯದ ತನುಜಾಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಸಂಬಂದ ಪಟ್ಟ ಅಧಿಕಾರಿಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ತನುಜಾಳ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X