ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟ: ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

Date:

Advertisements

ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್‌ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ.

ಆರಂಭದಲ್ಲಿ ಟಾಪರ್‌ಗಳೆಂದು ಘೋಷಿಸಲ್ಪಟ್ಟ 67 ಅಭ್ಯರ್ಥಿಗಳಲ್ಲಿ ಒಟ್ಟಾಗಿ 44 ಅಭ್ಯರ್ಥಿಗಳು ಸಂಪೂರ್ಣ ಅಂಕವನ್ನು ಪಡೆದಿದ್ದರು. ನಿರ್ದಿಷ್ಟ ಭೌತಶಾಸ್ತ್ರ ವಿಷಯಕ್ಕೆ ಗ್ರೇಸ್ ಅಂಕ ನೀಡಿದ್ದರಿಂದ ಪೂರ್ಣ ಅಂಕಗಳನ್ನು ಈ ಅಭ್ಯರ್ಥಿಗಳು ಗಳಿಸಿದ್ದರು.

ಬಳಿಕ ಕೆಲವು ಕೇಂದ್ರಗಳಲ್ಲಿ ಸಮಯ ವ್ಯರ್ಥವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ಹಿಂಪಡೆಯಲಾಗಿದ್ದು, ಟಾಪರ್‌ಗಳ ಸಂಖ್ಯೆಯು 67ರಿಂದ 61ಕ್ಕೆ ಇಳಿಕೆಯಾಗಿತ್ತು. ಇದೀಗ ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟವಾದ ಬಳಿಕ ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ.

Advertisements

ಇದನ್ನು ಓದಿದ್ದೀರಾ? ನೀಟ್-ಯುಜಿ ಅಂತಿಮ ಫಲಿತಾಂಶ ಎರಡು ದಿನಗಳಲ್ಲಿ ಪ್ರಕಟ: ಧರ್ಮೇಂದ್ರ ಪ್ರಧಾನ್

ಫಲಿತಾಂಶದ ಪ್ರಕಾರ ಟಾಪ್ ಸ್ಕೋರರ್‌ಗಳು 99.9992714 ಪ್ರತಿಶತದೊಂದಿಗೆ ಪರಿಪೂರ್ಣ 720 ಅಂಕಗಳನ್ನು ಸಾಧಿಸಿದ್ದಾರೆ. ಪ್ರತಿ ಪ್ರಶ್ನೆಗೆ ಒಂದೇ ಒಂದು ನಿಖರವಾದ ಉತ್ತರವನ್ನು ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಪರಿಷ್ಕೃತ ಫಲಿತಾಂಶದಲ್ಲಿ ಬದಲಾವಣೆ ಕಂಡುಬಂದಿದೆ.

ಇದರ ಪರಿಣಾಮವಾಗಿ ಈ ಹಿಂದೆ 720ಕ್ಕೆ 715 ಅಂಕ ಪಡೆದಿದ್ದ 44 ವಿದ್ಯಾರ್ಥಿಗಳು 720 ಅಂಕ ಪಡೆದವರ ಮತ್ತು 720ಕ್ಕೆ 716 ಅಂಕ ಪಡೆದ 70 ವಿದ್ಯಾರ್ಥಿಗಳ ನಂತರದ ಸ್ಥಾನವನ್ನು ಪಡೆದಿದ್ದಾರೆ.

ಮೇ 5ರಂದು ನಡೆಸಿದ ನೀಟ್‌-ಯುಜಿ ಪರೀಕ್ಷೆಯು 14 ಅಂತರಾಷ್ಟ್ರೀಯ ಸ್ಥಳಗಳನ್ನು ಒಳಗೊಂಡಂತೆ 571 ನಗರಗಳಲ್ಲಿ 4,750 ಕೇಂದ್ರಗಳಲ್ಲಿ ನಡೆಸಲಾಗಿದೆ. ಆದರೆ ಪರೀಕ್ಷೆಯ ವೇಳೆ ಸಮಯದ ನಿರ್ಬಂಧ ಎದುರಿಸಿದ 1,563 ಅಭ್ಯರ್ಥಿಗಳಿಗೆ ಜೂನ್ 23ರಂದು ಮರು-ಪರೀಕ್ಷೆ ಮಾಡಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X