ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಹಿಂದೂ ಮಹಿಳೆಯರು ನಾಲ್ಕು ಮಕ್ಕಳಿಗೆ ಜನ್ಮನೀಡಬೇಕೆಂದ ಸ್ವಾಮೀಜಿ!

Date:

Advertisements

ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಎಲ್ಲ ಹಿಂದೂ ಮಹಿಳೆಯರು ತಮ್ಮ ದೇಹದ ಸೌಂದರ್ಯದ ಚಿಂತೆಯನ್ನು ಬಿಟ್ಟು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶ್ರೀಮದ್ ಭಾಗವತ ಕಥಾದಲ್ಲಿ ಪ್ರವಚನ ನೀಡಿದ ಪಂಚಯತಿ ನಿರಾಂಜನಿ ಅಖಾಡಾದ ಮಹಾಮಂಡಲೇಶ್ವರ ಸ್ವಾಮಿ ಪ್ರೇಮಾನಂದ ಮಹಾರಾಜ್ ಈ ಪ್ರಚೋದನಕಾರಿ ಹೇಳಿಕೆಯನ್ನು ಮಾಡಿದ್ದಾರೆ.

“ನಾನು ಭಗವತ್ ಕಥಾದಲ್ಲಿ ನಿಮಗೆ ಇಷ್ಟವಾಗುವ ವಿಷಯವನ್ನು ಹೇಳಲು ಬಂದಿಲ್ಲ. ನಾನು ಸನಾತನ ಧರ್ಮವನ್ನು ಮುಂದಕ್ಕೆ ಕೊಂಡೊಯ್ಯುವ ವಿಷಯವನ್ನು ಹೇಳುತ್ತಿದ್ದೇನೆ. ಉತ್ತರ ಪ್ರದೇಶದ 17 ಜಿಲ್ಲೆಗಳು ನಮ್ಮ ಕೈ ತಪ್ಪಿಹೋಗಿದೆ” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ?  ಬುಡಕಟ್ಟು ಮಹಿಳೆಯರು ಹಿಂದೂಗಳಲ್ಲ, ಮಂಗಳಸೂತ್ರ ಧರಿಸಬಾರದು ಎಂದು ಹೇಳಿದ ಶಿಕ್ಷಕಿ ಅಮಾನತು

“ಪಶ್ಚಿಮ ಬಂಗಾಳದಲ್ಲೂ ಇದೇ ಪರಿಸ್ಥಿತಿಯಿದೆ. ಅಸ್ಸಾಂನಲ್ಲಿ 5 ಲಕ್ಷ ಜನರಿಗೆ ಪಾಸ್‌ಪೋರ್ಟ್ ಮತ್ತು ವೀಸಾ ಇಲ್ಲ. ಸರಳವಾಗಿ ಹೇಳುವುದಾದರೆ 2 ಕೋಟಿ ಆಗಿದ್ದವರು 9 ಕೋಟಿ ಆದರು, ಈಗ 38 ಕೋಟಿ ಆಗಿದ್ದಾರೆ” ಎಂದು ಮುಸ್ಲಿಮರ ಜನಸಂಖ್ಯೆಯನ್ನು ಉದ್ದೇಶಿಸಿ ದ್ವೇಷ ಬಿತ್ತುವ ಪ್ರವಚನ ಮಾಡಿದ್ದಾರೆ.

“ಇನ್ನೂ ಸಮಯವಿದೆ, ಜಾಗರೂಕರಾಗದಿದ್ದರೆ ಭಾರತವೂ ಇಂಡೋನೇಷ್ಯಾ ಆಗುತ್ತದೆ. ಶೀಘ್ರದಲ್ಲೇ ನೀವು ಅಲ್ಪಸಂಖ್ಯಾತರಾಗುತ್ತೀರಿ” ಎಂದಿದ್ದಾರೆ.

“ಸನಾತನ ಸಂಸ್ಕೃತಿಯನ್ನು ರಕ್ಷಿಸಲು ಮಹಿಳೆಯರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕಾಗಿದೆ. ಹಿಂದೂ ಮಹಿಳೆಯರು ಒಂದೆರಡು ಮಕ್ಕಳನ್ನು ಹೆರಲು ಕೂಡ ಹಿಂಜರಿಯುತ್ತಿದ್ದಾರೆ. ಆದರೆ ಇತರ ಸಮುದಾಯದ ಜನರು 8-8 ಮಕ್ಕಳನ್ನು ಹೆರುತ್ತಾರೆ. ಹಿಂದೂ ಮಹಿಳೆಯರು ನಿಮ್ಮ ದೇಹ ಸೌಂದರ್ಯದ ಚಿಂತೆಯನ್ನು ಬಿಟ್ಟು ಸನಾತನ ಧರ್ಮ ಮತ್ತು ದೇಶಕ್ಕಾಗಿ ಏನಾದರೂ ಮಾಡಬೇಕು” ಎಂದು ಹೇಳಿದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತಮ್ಮ ನಕಲಿ ಅಸ್ತಿತ್ವ ಉಳಿಸಿಕೊಳ್ಳಲು ಅವರಿಗೆ ಗೊತ್ತಿರುವ ಪಾಂಡಿತ್ಯ ಇಷ್ಟೇ,,ಇದೇ ಬಂಡವಾಳ ಪಾಪ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X