ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

Date:

Advertisements

ತನಗೆ ಹೆಣ್ಣು ಮಗು ಬೇಡವೆಂದು ತಾಯಿಯೊಬ್ಬಳು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ಘಟನೆ ಹೊರ ದೆಹಲಿಯ ಮುಂಡ್ಕಾ ಪ್ರದೇಶದ ನಡೆದಿದೆ.

22 ವರ್ಷದ ಮಹಿಳೆಯು ತನಗೆ ಜನಿಸಿ ಮಗು ಹೆಣ್ಣಾದ ಕಾರಣ ತನ್ನ ಮನೆಯಲ್ಲಿ ಮಗುವಿನ ಕತ್ತನ್ನು ಸೀಳಿ ಕೊಂದಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ಗೋವಿಂದ ಎಂಬ ವ್ಯಕ್ತಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ತನ್ನ ಪತ್ನಿ ತಮ್ಮ ಮಗಳ ಕತ್ತು ಕೊಯ್ದಿದ್ದಾಳೆ ಎಂದು ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

Advertisements

ಮುಂಡ್ಕಾದ ಟಿಕ್ರಿಯಲ್ಲಿರುವ ಬಾಬಾ ಹರಿದಾಸ್ ಕಾಲೋನಿಯಲ್ಲಿರುವ ಈ ದಂಪತಿಯ ಮನೆಗೆ ತಂಡವನ್ನು ಕಳುಹಿಸಲಾಗಿದೆ. ತಂಡವು ಎರಡನೇ ಮಹಡಿಯಲ್ಲಿರುವ ಕೋಣೆಯಲ್ಲಿ ಶಿಶುವು ಶವವಾಗಿ ಪತ್ತೆಯಾಗಿದೆ. ಅಲ್ಲಿಯೇ ತಾಯಿಯು ಕೂಡಾ ಇದ್ದಳು ಎಂದು ಉಪ ಪೊಲೀಸ್ ಆಯುಕ್ತ (ಹೊರ) ಜಿಮ್ಮಿ ಚಿರಂ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

“ನಿರಂತರ ವಿಚಾರಣೆಯ ನಂತರ ಮಹಿಳೆ ತನಗೆ ಹೆಣ್ಣು ಮಗು ಇಷ್ಟವಿರಲಿಲ್ಲ. ಅದಕ್ಕಾಗಿಯೇ ಮಗಳನ್ನು ಕೊಂಡಿದ್ದೇನೆ ಎಂದು ಬಹಿರಂಗಪಡಿಸಿದಳು” ಎಂದು ಚಿರಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಅಪರಾಧಕ್ಕೆ ಬಳಸಿದ ಚಾಕುವನ್ನು ವಶಕ್ಕೆ ಪಡೆದಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 103 (1) ಅಡಿಯಲ್ಲಿ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಆಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮಹಿಳೆಯ ಪತಿ ಹರಿಯಾಣದ ಬಹದ್ದೂರ್‌ಗಢದ ಶೂ ಫ್ಯಾಕ್ಟರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ದಂಪತಿಗೆ ಸುಮಾರು ಎರಡು ವರ್ಷದ ಮಗನಿದ್ದಾನೆ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X