ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

Date:

Advertisements

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್‌ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ.

ಭಾನುವಾರ ಮುಂಜಾನೆ ನೀರು ತುಂಬಿದ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ವಿದ್ಯಾರ್ಥಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಳಿಕ “ಮಾಲೀಕ ಅಭಿಷೇಕ್ ಗುಪ್ತಾ ಮತ್ತು ಕೋ-ಆರ್ಡಿನೇಟರ್‌ ದೇಶಪಾಲ್ ಸಿಂಗ್ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದ್ದಾರೆ.

“ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಕೊನೆಗೊಂಡಿದೆ. ನೆಲಮಾಳಿಗೆಯಿಂದ ಒಟ್ಟು ಮೂರು ಶವಗಳನ್ನು ಹೊರತೆಗೆಯಲಾಗಿದೆ. ಎಲ್ಲರ ಗುರುತು ಪತ್ತೆಯಾಗಿದೆ. ಘಟನೆಯ ಬಗ್ಗೆ ನಾವು ಕುಟುಂಬ ಸದಸ್ಯರಿಗೆ ತಿಳಿಸಿದ್ದೇವೆ” ಎಂದು ಡಿಸಿಪಿ ಹೇಳಿದರು.

Advertisements

ಇದನ್ನು ಓದಿದ್ದೀರಾ?  ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಮೃತ ವಿದ್ಯಾರ್ಥಿಗಳನ್ನು ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನೆವಿನ್ ಡಾಲ್ವಿನ್ (28) ಎಂದು ಗುರುತಿಸಲಾಗಿದೆ.

ಶ್ರೇಯಾ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರಾಗಿದ್ದರೆ, ತಾನಿಯಾ ಸೋನಿ ತೆಲಂಗಾಣದವರಾಗಿದ್ದಾರೆ. ನವೀನ್ ಡಾಲ್ವಿನ್ ಕೇರಳದ ಎರ್ನಾಕುಲಂನಿಂದ ಬಂದ ವಿದ್ಯಾರ್ಥಿಯಾಗಿದ್ದಾರೆ.

ಇನ್ನು ದೆಹಲಿಯ ಮೇಯರ್ ಶೆಲ್ಲಿ ಒಬೆರಾಯ್ ಅವರು ಕಟ್ಟಡಗಳ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಎಲ್ಲಾ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ. ಅಂತಹ ಕೋಚಿಂಗ್ ಸೆಂಟರ್‌ಗಳು ಕಟ್ಟಡದ ನಿಯಮಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ದೆಹಲಿಯ ಮಹಾನಗರ ಪಾಲಿಕೆಯ (ಎಂಸಿಡ) ಯಾವುದೇ ಅಧಿಕಾರಿಗಳು ದುರಂತಕ್ಕೆ ಹೊಣೆಗಾರರೇ ಎಂದು ತಿಳಿಯಲು ತಕ್ಷಣ ತನಿಖೆ ನಡೆಸಬೇಕು ಎಂದು ದೆಹಲಿ ಮೇಯರ್ ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X