ತುಮಕೂರು | ಚೈನ್‌ಲಿಂಕ್ ಆನ್‌ಲೈನ್‌ ವಂಚನೆ; ಮುಗ್ದರ ₹4 ಕೋಟಿ ದೋಖಾ ಮಾಡಿದ ವ್ಯವಸ್ಥಿತ ಜಾಲ

Date:

Advertisements

ಚೈನ್‌ಲಿಂಕ್ ಆನ್‌ಲೈನ್‌ ವಂಚನೆ ನಡೆದಿದ್ದು, ವ್ಯವಸ್ಥಿತ ಜಾಲವೊಂದು ಮುಗ್ದ ಜನರ ₹4 ಕೋಟಿ ದೋಖಾ ಮಾಡಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ವಾಟ್ಸಾಪ್ ಗ್ರೂಪ್ ಮೂಲಕ ಆ್ಯಪ್‌ ಅಪ್‌ಲೋಡ್ ಮಾಡಿ ಹೂಡಿದ ಹಣಕ್ಕೆ ನಿತ್ಯವೂ ದುಪ್ಪಟ್ಟು ಹಣ ನೀಡುವ ಆಮಿಷಕ್ಕೆ ಬಲಿಯಾದ ಸುಮಾರು 500 ಮಂದಿಯ 4-5 ಕೋಟಿ ರೂಪಾಯಿ ಹಣ ಲಪಾಟಿಯಿಸಿದ ಬೃಹತ್ ಅನ್‌ಲೈನ್‌ ವಂಚನೆ ಪ್ರಕರಣ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಲ್ಲೂರು ಗ್ರಾಮದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ ವಂಚಕರ ಜಾಲ ಮೊದಲು ಡಾಟಾ ಮೀರ್ ಎಐ ಎಂಬ ಆ್ಯಪ್‌ ಡೌನ್‌ಲೋಡ್‌ ಮಾಡಲು ಸೂಚಿಸಿ ಹಣದ ಹೂಡಿಕೆ ಹಾಗೆಯೇ ನಿತ್ಯ ಹಣ ಲಾಭ ಬರುವ ಬಗ್ಗೆ ಹೇಳಿದ್ದರು. 300 ರಿಂದ ಆರಂಭಿಸಿ 4 ಲಕ್ಷದ ವರೆಗೆ ವಹಿವಾಟು ಮಾಡುವ ಮುಗ್ಧ ಜನರು ತಮ್ಮ ಹೂಡಿಕೆ ಹಣಕ್ಕೆ 80 ದಿನದಲ್ಲಿ ದುಪ್ಪಟ್ಟ ಹಣ ನೀಡುವ ಆಸೆಗೆ ವಂಚಕ ಜಾಲ ಮೊದಲ ಹಂತದಲ್ಲಿ ದುಪ್ಪಟ್ಟು ಹಣ ನೀಡಿ ನಂಬಿಸಿದ್ದಾರೆ.

Advertisements

ಚೈನ್‌ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್‌ಗೆ ಸೇರಿದ ಕಲ್ಲೂರಿನ 600ಕ್ಕೂ ಅಧಿಕ ಜನ ಹಣದ ಆಸೆ ಮತ್ತು ಒಬ್ಬ ಗ್ರಾಹಕರನ್ನು ಹುಡುಕಿಕೊಟ್ಟರೆ ಶೇ.10ರಷ್ಟು ಕಮಿಷನ್ ಆಸೆಗೆ ಬಲಿಯಾಗಿದ್ದಾರೆ. ಬೆಂಗಳೂರು ವಾಸಿಯಾಗಿರುವ ಕಲ್ಲೂರು ಮೂಲದ ಮೂರು ಮಂದಿ ಈ ಚೈನ್‌ಲಿಂಕ್ ಪ್ರಚಾರ ಮಾಡಿ ನಂತರ ಕೆಲವರನ್ನು ಬೆಂಗಳೂರು ನಗರದಲ್ಲಿ ಮೀಟಿಂಗ್ ನಡೆಸಿ ದೊಡ್ಡ ವೇತನ ನೀಡುವ ಆಸೆಯನ್ನೂ ಹುಟ್ಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

“₹500 ಹೂಡಿಕೆ ಮಾಡಿದರೆ ಐದು ದಿನದಲ್ಲಿ ₹450 ಬರುವ ಆಸೆ, ಕೆಲವರಿಗೆ 80 ದಿನದಲ್ಲಿ ದ್ವಿಗುಣ ಹಣ ನೀಡುವ ಆಮಿಷ ಸೇರಿದಂತೆ ಹಲವು ರೀತಿಯ ಯೋಜನೆಗಳನ್ನು ವಿವರಿಸಿ ವಂಚಿಸಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹದ ಬಳಿಕ ಆ್ಯಪ್ ರದ್ದು ಮಾಡಿ ವ್ಯವಸ್ಥಿತವಾಗಿ ನಾಪತ್ತೆಯಾಗಿದ್ದಾರೆ. ವಂಚನೆಗೆ ಒಳಗಾದ ಸುಮಾರು 40 ಮಂದಿ ಸಂತ್ರಸ್ತರು ಸಿ ಎಸ್ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯವಸ್ಥಿತ ಜಾಲ ರಾಜ್ಯದೆಲ್ಲೆಡೆ ಆನ್‌ಲೈನ್‌ ಮೋಸ ನಡೆಸಿರುವ ಅನುಮಾನವಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ತನಿಖೆ ನಡೆಸಲಾಗುವುದು” ಎಂದು ಡಿವೈಎಸ್‌ಪಿ ಶೇಖರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X