ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ: ರಾಜಕೀಯ ಪ್ರವೇಶ ವದಂತಿಗೆ ತೆರೆ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ

Date:

Advertisements

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಏಕೈಕ ಪುತ್ರ ನಿಶಾಂತ್ ಕುಮಾರ್ ಅವರು ಸಕ್ರಿಯ ರಾಜಕಾರಣಕ್ಕೆ ಸೇರುವ ವದಂತಿಗೆ ತೆರೆ ಎಳೆದಿದ್ದಾರೆ. ತಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿರುವುದಾಗಿ ನಿಶಾಂತ್ ಕುಮಾರ್ ಹೇಳಿದ್ದಾರೆ.

ಬಿಹಾರ ರಾಜ್ಯ ರಾಜಧಾನಿಯ ಪಾಟ್ನಾ ಮಾರುಕಟ್ಟೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್, “ನಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ. ಹರೇ ರಾಮ ಹರೇ ಕೃಷ್ಣ ಭಜನೆಯನ್ನು ಕೇಳಲು ಸ್ಪೀಕರ್ ಖರೀದಿಸಲು ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

Advertisements

ಹಾಗೆಯೇ, “ನಾನು ಪ್ರತಿದಿನ ಬೆಳಿಗ್ಗೆ ನನ್ನ ಫೋನ್‌ನಲ್ಲಿ ಈ ಭಜನೆಯನ್ನು ಕೇಳುತ್ತೇನೆ. ಹೊಸ ಸಾಧನದೊಂದಿಗೆ, ನಾನು ಭಜನೆಯನ್ನು ಇನ್ನಷ್ಟು ಸುಲಭವಾಗಿ ಕೇಳಲು ಈ ಸ್ಪೀಕರ್ ನನಗೆ ಸಹಾಯ ಮಾಡುತ್ತದೆ” ಎಂದು ರಾಜಕೀಯಕ್ಕೆ ಸೇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ನಿಶಾಂತ್ ಕುಮಾರ್ ಉತ್ತರಿಸಿದ್ದಾರೆ.

49 ವರ್ಷದ ನಿಶಾಂತ್ ಕುಮಾರ್ ರಾಜಕೀಯ ಮಹತ್ವಾಕಾಂಕ್ಷೆಯ ಬಗ್ಗೆ ಮಾತನಾಡಲು ಇಷ್ಟಪಡದಿದ್ದರೂ, ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಆಸಕ್ತಿ ಸದ್ಯಕ್ಕಿಲ್ಲ ಎಂಬ ಸುಳಿವು ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X