ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

Date:

Advertisements

ಪ್ಯಾರಿಸ್ ಒಲಿಂಪಿಕ್ಸ್ 2024ರ ಎರಡನೇ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದ್ದು, ಪಿ ವಿ ಸಿಂಧು ಸೇರಿ ಆರು ಕ್ರೀಡಾಪಟುಗಳು ಮೊದಲ ಗೆಲುವು ದಾಖಲಿಸಿ ಪದಕದ ಭರವಸೆ ಮೂಡಿಸಿದ್ದಾರೆ.

ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್‌ ವಿಭಾಗದಲ್ಲಿ ಈಗಾಗಲೇ ಎರಡು ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದಿರುವ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಮಾಲ್ಡೀವ್ಸ್‌ನ ಫಾತಿಮತ್ ಅಬ್ದುಲ್‌ ರಝಾಕ್ ವಿರುದ್ಧ 21-9, 21-6 ಅಂತರದಲ್ಲಿ ಗೆಲುವು ದಾಖಲಿಸಿದರು.

ಕೇವಲ 29 ನಿಮಿಷಗಳಲ್ಲಿ ಆಟ ಮುಗಿಸಿದ ಪಿ ವಿ ಸಿಂಧು ಎರಡನೇ ಸುತ್ತಿಗೆ ಅರ್ಹತೆ ಪಡೆದರು. ಜುಲೈ 29ರಂದು ಎಸ್ಟೋನಿಯಾದ ವಿಶ್ವದ 75ನೇ ಶ್ರೇಯಾಂಕದ ಕ್ರಿಸ್ತಿನ್‌ ಕೂಬಾ ಅವರನ್ನು ಎದುರಿಸಲಿದ್ದಾರೆ. ಸಿಂಧು ಅವರು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಹಾಗೂ 2021ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಪದಕ ಗೆದ್ದಿದ್ದರು.

Advertisements

ಪುರುಷರ ಬ್ಯಾಡ್ಮಿಂಟನ್

ಪುರುಷರ ಬ್ಯಾಡ್ಮಿಂಟನ್ ವಿಭಾಗದ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಭಾರತದ ಆಟಗಾರರು ಗೆಲುವು ಸಾಧಿಸಿದ್ದಾರೆ. ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್‌ ಗ್ಯಾಟೆಮಾಲಾದ ಕೆವಿನ್‌ ಕೋರ್ಡನ್‌ ಅವರನ್ನು 21-8,22-10 ಅಂತರದ ಮೂಲಕ ಪರಾಭವಗೊಳಿಸಿ ಎರಡನೇ ಸುತ್ತಿಗೆ ಪ್ರವೇಶ ಪಡೆದರು. ಡಬಲ್ಸ್‌ನಲ್ಲಿ ಸಾತ್ವಿಕ್‌ ಶ್ರೀರಾಜ್‌ ಹಾಗೂ ಚಿರಾಗ್‌ ಶೆಟ್ಟಿ ಫ್ರಾನ್ಸನ ಲೂಕಸ್‌ ಕೋರ್ವಿ, ರೋನನ್ ಲಬರ್‌ ಅವರನ್ನು ಸೋಲಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದರು.

ರೋಯಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತದ ಏಕೈಕ ರೋಯಿಂಗ್ ಆಟಗಾರ ಬಲರಾಜ್ ಪನ್ವಾರ್, ಪುರುಷರ ಸಿಂಗಲ್ ರೋಯಿಂಗ್​ ಈವೆಂಟ್‌ನ ಮೊದಲ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ರಿಪಿಚೇಜ್‌ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. 25 ವರ್ಷದ ಬಾಲರಾಜ್ 7:7.11 ನಿಮಿಷಗಳಲ್ಲಿ ಗುರಿ ತಲುಪಿದರು.

ಬಾಲರಾಜ್ ಈಗ ರಿಪಿಚೇಜ್ ಸುತ್ತಿನಲ್ಲಿ ಪಾಲ್ಗೊಳ್ಳಲಿದ್ದು, ಅವರು ಈ ಸುತ್ತಿನ ಮೂಲಕ ಸೆಮಿಫೈನಲ್ ಅಥವಾ ಫೈನಲ್‌ಗೆ ಪ್ರವೇಶಿಸಲು ಎರಡನೇ ಅವಕಾಶವನ್ನು ಪಡೆಯಲಿದ್ದಾರೆ. ಬಾಲರಾಜ್ ಅವರು 2022ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು ಮತ್ತು ಕೊರಿಯಾದಲ್ಲಿ ನಡೆದ ಏಷ್ಯನ್ ಮತ್ತು ಓಷಿಯಾನಿಯಾ ಒಲಿಂಪಿಕ್​ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದೀಗ ಅವರಿಗೆ ಎರಡನೇ ಅವಕಾಶವಿದ್ದು ಸೆಮಿ ಅಥವಾ ಫೈನಲ್​ ಪ್ರವೇಶ ಪಡೆಯುವ ಅವಕಾಶವಿದೆ.

ಏರ್‌ ರೈಫಲ್

ಮಹಿಳೆಯರ ಏರ್‌ ರೈಫಲ್‌ ವಿಭಾಗದ 10 ಮೀಟರ್‌ ಸ್ಪರ್ಧೆಯಲ್ಲಿ ಭಾರತದ ರಮಿತಾ ಜಿಂದಾಲ್‌ ಫೈನಲ್‌ ಪ್ರವೇಶಿಸಿದ್ದಾರೆ. ಇದೇ ವಿಭಾಗದ ಮತ್ತೊಂದು ಸ್ಪರ್ಧೆಯಲ್ಲಿ ನಮ್ಮ ದೇಶದವರೆ ಆದ ಎಲವೆನಿಲ್ ವಲರಿವನ್‌ ಮೊದಲ ಸುತ್ತಿನಲ್ಲಿ ಗೆಲುವು ಪಡೆದರೂ 2ನೇ ಸುತ್ತಿನಲ್ಲಿ ಸೋಲು ಕಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X