ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

Date:

Advertisements

ಶನಿವಾರ ರಾತ್ರಿ ತಮಿಳುನಾಡಿನ ಶಿವಗಂಗೈಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದೆ.

ಶಿವಗಂಗೈ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ತಮ್ಮ ಮಾಲೀಕತ್ವದ ಇಟ್ಟಿಗೆಗೂಡಿನಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಮಾರ್ಗಮಧ್ಯೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ದಾರಿಹೋಕರು ರಕ್ತದ ಮಡುವಿನಲ್ಲಿದ್ದ ಸೆಲ್ವಕುಮಾರ್ ಅವರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ಸೆಲ್ವಕುಮಾರ್‌ ಮೃತಪಟ್ಟಿದ್ದರು. ಪೊಲೀಸರು ಸೆಲ್ವಕುಮಾರ್ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Advertisements

ಸೆಲ್ವಕುಮಾರ್ ಹತ್ಯೆ ಖಂಡಿಸಿ ಗ್ರಾಮಸ್ಥರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.  ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಮೃತದೇಹ ಸ್ವೀಕರಿಸಲು ನಿರಾಕರಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗಾಗಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಆರೋಪಿಸಿದರು.

ಈ ನಡುವೆ ಶಿವಗಂಗೈ ಸಂಸದ ಕಾರ್ತಿ ಪಿ ಚಿದಂಬರಂ ಹತ್ಯೆಯಲ್ಲಿ ಯಾವುದೇ ರಾಜಕೀಯ ಕೈವಾಡವಿಲ್ಲ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಸೆಲ್ವಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಪಕ್ಷದಿಂದ ನೆರವು ನೀಡುವ ಭರವಸೆ ನೀಡಿದರು.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ನಡೆದ ಎರಡನೇ ರಾಜಕೀಯ ಕೊಲೆ ಇದಾಗಿದೆ. ತಮಿಳುನಾಡಿನ ಕಡಲೂರಿನಲ್ಲಿ ಶನಿವಾರ ಎಐಎಡಿಎಂಕೆ ಕಾರ್ಯಕರ್ತನನ್ನು ಕೊಲೆ ಮಾಡಲಾಗಿತ್ತು.

ಜುಲೈ 5 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನಲ್ಲಿ ಹತ್ಯೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X