ರಾಯಚೂರು | ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ದ ಧ್ವನಿ ಎತ್ತಬೇಕು : ನಿವೃತ್ತ ನ್ಯಾ.ಬಿ.ಟಿ ವೆಂಕಟೇಶ

Date:

Advertisements

ದೇಶದ ಪ್ರತಿಯೊಬ್ಬ ನಾಗರಿಕನು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ದ ಧ್ವನಿ ಎತ್ತಬೇಕಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಟಿ ವೆಂಕಟೇಶ ಹೇಳಿದರು.

ನಾಗರಿಕರ ಹಕ್ಕುಗಳ ಸಂರಕ್ಷಣಾ ಸಂಘ ರಾಯಚೂರು ಘಟಕದಿಂದ ನಗರದ ಇಸ್ಲಾಮಿಕ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಹೊಸ ಅಪರಾಧ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಇಂದು ದೇಶದಲ್ಲಿ ಅನ್ಯಾಯವನ್ನು ಪ್ರಶ್ನಿಸಿದವರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ʼಒಂದು ದೇಶ, ಒಂದು ಭಾಷೆ, ಒಂದು ಸಂಸ್ಕೃತಿʼ ಹೆಸರಿನಲ್ಲಿ ನಾಗರಿಕರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆʼ ಎಂದು ಬೇಸರ ವ್ಯಕ್ತಪಡಿಸಿದರು.

ʼಎಲ್ಲರೂ ದೇಶದ ಮೂಲಭೂತ ಹಕ್ಕು ಹಾಗೂ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಬೇಕು. ಆದರೆ, ಕಳೆದ 10 ವರ್ಷಗಳಲ್ಲಿ ದೇಶದ ನಾಗರಿಕರ ಹಕ್ಕುಗಳಿಗೆ ಕಳಂಕ ತರಲಾಗುತ್ತಿದೆ. ಕೇಂದ್ರದ ಆಡಳಿತ ಸರ್ಕಾರವನ್ನು ಪ್ರಶ್ನಿಸಿದವರಿಗೆ ʼಕಾಂಗ್ರೆಸ್ ಪರʼ ಎಂದು ಟೀಕಿಸುತ್ತಾರೆ. ಇನ್ನು ದೇಶದ ಪತ್ರಕರ್ತರ ಧ್ವನಿಯನ್ನು ಅಡಗಿಸಲಾಗುತ್ತಿದೆʼ ಎಂದರು .

Advertisements

ʼಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೊಳಿಸಿ ನಾಗರಿಕರ ಮೇಲೆ ಹೇರಲಾಗುತ್ತಿದೆ. ಹಳೆಯ ಕಾನೂನು ಬ್ರಿಟಿಷರ ಕಾನೂನುಗಳೆಂದು ಕೇಂದ್ರ ಸರ್ಕಾರ ಹೆಸರು ಬದಲಾಯಿಸಿ ಅನೇಕ ಮಾರ್ಪಾಡು ಮಾಡಲಾಗಿದೆ. ಆದರೆ‌, ಕಾನೂನು ಜಾರಿಗೊಳಿಸಲು ಅನೇಕ ನಿಯಮಗಳಿವೆ. ಡ್ರಾಫ್ಟ್ ಬಿಲ್, ಎಕ್ಸ್ ಪೋರ್ಟ್ ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು. ಕೇಂದ್ರ ಸರಕಾರ ಕಲ್ಯಾಣ ರಾಜ್ಯದ ಬದಲಾಗಿ ಪೊಲೀಸ್ ರಾಜ್ಯವನ್ನಾಗಿ ನಿರ್ಮಿಸಲು ಮುಂದಾಗಿದೆʼ ಎಂದು ಹೇಳಿದರು.

ತೆಲಂಗಾಣದ ಹಿರಿಯ ವಕೀಲ ಸೈಯದ್ ಇಸ್ಲಾಮುದ್ದಿನ ಮುಜಾಹೀದ್ ಮಾತನಾಡಿ, ʼಈ ಹೊಸ ಕಾನೂನುಗಳು ಜಾರಿಯಾದರೆ 2029 ರಲ್ಲಿ ದೇಶದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಹೊಸ ಕ್ರಿಮಿನಲ್ ಕಾನೂನುಗಳಿಂದ ಭಯದ ವಾತಾವರಣ ಸೃಷ್ಟಿಸುವ ಹುನ್ನಾರ ನಡೆದಿದೆ. ಹೊಸ ಕ್ರಿಮಿನಲ್ ಕಾನೂನುಗಳಿಂದ ಮೂಲಭೂತ ಹಕ್ಕುಗಳನ್ನು ತಿರುಚಲಾಗುತ್ತಿದೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಇಕ್ಬಾಲ್ ಅಹಮದ್, ಖಾಜಾ ಅಸ್ಲಾಂ, ಸಿರಾಜ್ ಜಾಫ್ರಿ, ಸುಲ್ತಾನ್ ವಕೀಲ್, ಅನ್ವರ್ ವಹೀದ್, ಖಾಜಾ ವಲಿದ, ಓವೈಸಿ ಅಹಮದ್ ಸಜ್ಜಾದ್ , ಅಸೀಮುದ್ದಿನ್ , ಪಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X