ಶ್ರೀಲಂಕಾ ವಿರುದ್ಧ ಟಿ20 ಸರಣಿ: ಭಾರತಕ್ಕೆ 2-0 ಜಯ

Date:

Advertisements

ಯಶಸ್ವಿ ಜೈಸ್ವಾಲ್‌ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್‌ ಹಾಗೂ ಭಾರತದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಟೀಂ ಇಂಡಿಯಾ ತನ್ನದಾಗಿಸಿಕೊಂಡಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ಕುಶಾಲ ಪೆರೆರಾ (53) ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್‌ನಷ್ಟಕ್ಕೆ 161 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 162 ರನ್ ಗಳ ಗುರಿ ನೀಡಿತು.

ಪಥುಮ್ ನಿಸಾಂಕ (32; 24ಎ) ಮತ್ತು ಕುಶಾಲ ಮೆಂಡಿಸ್ (10, 11ಎ) ಅವರು ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಆದರೆ ನಾಲ್ಕನೇ ಒವರ್‌ನಲ್ಲಿ ಮೆಂಡಿಸ್ ವಿಕೆಟ್ ಗಳಿಸಿದ ಆರ್ಷದೀಪ್ ಸಿಂಗ್  ಜೊತೆಯಾಟವನ್ನು ಮುರಿದರು. ಈ ಹಂತದಲ್ಲಿ ಪಥುಮ್ ಮತ್ತು ಪೆರೆರಾ ಅವರು ಜೊತೆಗೂಡಿದರು. ಎರಡನೇ ವಿಕೆಟ್‌ಗೆ ಜೊತೆಯಾಟದಲ್ಲಿ 54 ರನ್‌ ಸೇರಿಸಿದರು. ಹತ್ತನೇ ಓವರ್‌ನಲ್ಲಿ ಪಥುಮ್ ವಿಕೆಟ್ ಪಡೆದ ರವಿ ಬಿಷ್ಣೋಯಿ ಜೊತೆಯಾಟಕ್ಕೆ ತಡೆಯೊಡ್ಡಿದರು. ಕೊನೆಯಲ್ಲಿ 22 ರನ್‌ಗಳ ಅಂತರದಲ್ಲಿ ಶ್ರೀಲಂಕಾದ 5 ವಿಕೆಟ್‌ಗಳು ಪತನವಾದವು.

Advertisements

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದ ಕಾರಣ ಓವರ್‌ಗಳನ್ನು ಪರಿಷ್ಕರಿಸಿ ಗೆಲುವಿಗೆ 8 ಓವರ್‌ಗಳಲ್ಲಿ 78 ರನ್‌ಗಳ ಗುರಿ ನೀಡಲಾಯಿತು. ಟೀಂ ಇಂಡಿಯಾ 6.3 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 81 ರನ್‌ ಗಳಿಸಿ ಗೆಲುವಿನ ಗಡಿ ದಾಟಿತು. ಜೈಸ್ವಾಲ್‌ (30; 15ಎ), ಸೂರ್ಯಕುಮಾರ್ (26, 12ಎ) ಮತ್ತು ಹಾರ್ದಿಕ್‌ ಪಾಂಡ್ಯ (ಅಜೇಯ 22; 9ಎ) ರನ್‌ ಗಳಿಸಿ ಗೆಲುವಿನ ರೂವಾರಿಯಾದರು. ಕೊನೆಯ ಪಂದ್ಯವು ಮಂಗಳವಾರ(ಜುಲೈ 30) ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್:

ಶ್ರೀಲಂಕಾ: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 161 (ಪಥುಮ್ ನಿಸಾಂಕ 32, ಕುಶಾಲ ಪೆರೆರಾ 53, ಕಮಿಂದು ಮೆಂಡಿಸ್ 26, ಅಸಲಂಕಾ 14, ಅರ್ಷದೀಪ್ ಸಿಂಗ್ 24/2, ಅಕ್ಷರ್ ಪಟೇಲ್ 30ಕ್ಕೆ/2, ರವಿ ಬಿಷ್ಣೋಯಿ 26/3, ಹಾರ್ದಿಕ್ ಪಾಂಡ್ಯ 23/2).

ಭಾರತ: 6.3 ಓವರ್‌ಗಳಲ್ಲಿ 81/3 (ಜೈಸ್ವಾಲ್‌ 30, ಸೂರ್ಯಕುಮಾರ್‌ 26, ಹಾರ್ದಿಕ್‌ ಪಾಂಡ್ಯ ಅಜೇಯ 22). ಫಲಿತಾಂಶ: ಭಾರತಕ್ಕೆ ಡಕ್ವರ್ಥ್‌ ಲೂಯಿಸ್‌ ನಿಯಮದಡಿ 7 ವಿಕೆಟ್‌ಗಳ ಜಯ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X