ಬೀದರ್‌ | ರಸ್ತೆ ಗುಂಡಿ ಮುಚ್ಚದಿದ್ದರೆ ಸಸಿ ನೆಟ್ಟು ಪ್ರತಿಭಟನೆ : ದಸಂಸ

Date:

Advertisements

ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟು ತಗ್ಗು, ಗುಂಡಿಗಳು ಬಿದ್ದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಔರಾದ ತಾಲೂಕು ದಸಂಸ ಸಮಿತಿಯ ಪದಾಧಿಕಾರಿಗಳು ಸೋಮವಾರ ಔರಾದ್‌ ತಹಸೀಲ್ದಾರ್‌ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್‌ ಕಚೇರಿ ಅಧಿಕಾರಿ ವೆಂಕಟೇಶ ಅವರಿಗೆ ಸಲ್ಲಿಸಿದರು.

ʼಕಮಲನಗರ ತಾಲೂಕಿನ ದಾಬಕಾ (ಸಿಎಚ್)‌ – ಚಿಕ್ಲಿ(ಯು) ಮಧ್ಯದ ರಸ್ತೆ ಹಾಗೂ ಔರಾದ್‌ದಿಂದ ವ್ಹಾಯಾ ಬೆಳಕುಣಿ(ಸಿ), ಮಹಾಡೋಣಗಾಂವ್‌, ಠಾಣಾ ಕುಶನೂರ್‌, ಹಿಪ್ಪಳಗಾಂವ್‌ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ತಗ್ಗು, ಗುಂಡಿಗಳದ್ದೇ ಕಾರುಬಾರು. ಹೀಗಾಗಿ ವಾಹನ ಸವಾರರು ಗುಂಡಿಗಳ ಮಧ್ಯ ರಸ್ತೆ ಹುಡುಕಬೇಕಾದ ಪರಿಸ್ಥಿತಿ ಇದೆ. ಇಲ್ಲಿನ ನಾಗರಿಕರು ಪ್ರತಿನಿತ್ಯ ಓಡಾಡಲು ಹರಸಾಹಸ ಪರದಾಡುತ್ತಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರಸ್ತೆ ದುರಸ್ತಿಗೆ ಮುಂದಾಗುತ್ತಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರಸ್ತೆ ಪರಿಶೀಲಿಸಿ ಎರಡ್ಮೂರು ದಿನಗಳಲ್ಲಿ ರಸ್ತೆ ತಗ್ಗು, ಗುಂಡಿ ಮುಚ್ಚಿ ದುರಸ್ತಿಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ರಸ್ತೆ ಗುಂಡಿಗಳಲ್ಲಿ ಸಸಿ ನೆಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸುಭಾಷ ಲಾಧಾ, ಸಹ ಸಂಚಾಲಕ ಗಣಪತರಾವ್‌ ವಾಸುದೇವ, ದತ್ತಾತ್ರಿ ದತ್ತೂರೆ, ಪ್ರಕಾಶ ಕಾಂಬಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X