ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿ ಕೆ ಶಿವಕುಮಾರ್

Date:

Advertisements

ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಯಾವುದೇ ಸಮಸ್ಯೆ ಸೃಷ್ಟಿಯಾಗಿಲ್ಲ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

ಕೆಆರ್‌ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ಮಾತನಾಡಿದ ಅವರು, ”ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು.

”ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಾಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ” ಎಂದರು.

Advertisements

ಮೋಡಕ್ಕೆ ಯಾವ ಸರ್ಕಾರ ಇದೆ ಎಂದು ಗೊತ್ತಿರುವುದಿಲ್ಲ

”ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯ ಅವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ ಆದ ಕಾರಣ ನೀರು ಅವರಿಗೆ ಹೋಗಿದೆ. ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ” ಎಂದು ಹೇಳಿದರು.

82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

”ಭಾರತದ ಏಳು ಪವಿತ್ರ ನದಿಗಳಲ್ಲಿ ಕಾವೇರಿಯೂ ಒಂದು. ಜನರ ಕುಡಿಯುವ ನೀರು, ವ್ಯವಸಾಯ, ಕೈಗಾರಿಕೆಗಳಿಗೆ ಕಾವೇರಿ ಜೀವ ನೀಡುತ್ತಿದ್ದಾಳೆ. ಈ ವರ್ಷ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಸುಮಾರು 62 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ” ಎಂದು ತಿಳಿಸಿದರು.

ಬೃಂದಾವನಕ್ಕೆ ಹೊಸ ರೂಪ; ಕಾವೇರಿ ಆರತಿ ಪ್ರಾರಂಭ

”ಬೃಂದಾವನ ಅಣೆಕಟ್ಟೆಯನ್ನು ಮೈಸೂರು ಮಹಾರಾಜರು ಅದ್ಬುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X