ಧಾರವಾಡ | ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಸೂಕ್ತ: ಎನ್ ಎಫ್ ಮಾಳನ್ನವರ

Date:

Advertisements

ಪರಿಸರ ಸಂರಕ್ಷಣೆಯು ಶತಮಾನಗಳಿಂದ ವಿಶ್ವದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಮತ್ತು ಮಾಲಿನ್ಯದ ಮೇಲೆ ಕಟ್ಟುನಿಟ್ಟು ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರದ ಅವನತಿ ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿ ಎನ್ ಎಫ್ ಮಾಳನ್ನವರ ಹೇಳಿದರು.

ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ಘಟಕ ಮತ್ತು ಲಯನ್ಸ್ ಕ್ಲಬ್ ಧಾರವಾಡ ಗ್ಯಾಲಕ್ಸಿ, ಸಂಯೋಗದಲ್ಲಿ ಹಾರೊಬೆಳವಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣಾ ದಿನಾಚರಣೆಯಲ್ಲಿ ಮಾತನಾಡಿದರು.

ಲಯನ್ಸ್ ಕ್ಲಬ್ ಧಾರವಾಡ ಗ್ಯಾಲಕ್ಸಿಯ ಅಧ್ಯಕ್ಷ ಗುಂಡಪ್ಪ ರಾಥೋಡ್ ಮಾತನಾಡಿ, “ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವುದು, ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದರಿಂದ ಪರಿಸರ ಸಂರಕ್ಷಣೆ ಆಗುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮನರೇಗಾ ಅಡಿ ಕ್ರಿಯಾ ಯೋಜನೆ ಮಂಜೂರಾತಿಗೆ ಕೃಷಿ ಕೂಲಿಕಾರರ ಸಂಘ ಆಗ್ರಹ

ಅಂಜುಮನ್ ಪದವಿ ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿ ಡಾ. ನಾಗರಾಜ್ ಗುದಗನವರ್ ಮಾತನಾಡಿ, “ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ತಾಪಮಾನ, ಮಣ್ಣಿನ ಸವೆತವನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಿಸಲು ಸಹಾಯವಾಗುತ್ತದೆ” ಎಂದರು.

ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಶಂಕರಗೌಡ ಪಾಟೀಲ, ಲಯನ್ ಜ್ಯೋತಿ ಹಿರೇಮಠ, ಸಮುದಾಯ ಆರೋಗ್ಯ ಅಧಿಕಾರಿ ಪರ್ವೀನ್ ಭಾನು ತಾಳಿಕೋಟಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X